ನಿಡಗುಂದಿ: ಸಂವಿಧಾನ ಕರ್ತೃ ಡಾ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ರಾಯಚೂರ ಜಿಲ್ಲಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಪರ ನಾನಾ ಸಂಘಟನೆಗಳು ನಿಡಗುಂದಿ ಪಟ್ಟಣದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ಘೋಷಣೆ ಕೂಗುತ್ತಾ ಸಾಗಿದ ಪ್ರತಿಭಟನಾಕಾರರು ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟಿಸಿದರು.

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ


ವಿವಿಧ ಸಂಘಟನೆಯ ಮುಖಂಡರಾದ ಅಶೋಕ ಚಲವಾದಿ, ಶ್ರೀನಾಥ ಭೈರವಾಡಗಿ, ಪೀರಪ್ಪ ದೊಡಮನಿ, ಲಕ್ಷ್ಮಣ ಮುಂದಿನಮನಿ ಘಟನೆ ಖಂಡಿಸಿ ಮಾತನಾಡಿ, ನ್ಯಾಯಾಧೀಶರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಅಸ್ಪೃಶ್ಯರ ಏಳಿಗೆ ಸಹಿಸದ ಅನೇಕರು ಮೇಲಿಂದ ಮೇಲಿ ಸಂವಿಧಾನ ಶಿಲ್ಪಿಯನ್ನು ಅಪಮಾನ ಮಾಡುತ್ತಿದ್ದಾರೆ ಎಂದರು.

ತಹಶೀಲ್ದಾರ್ ‌ಮೂಲಕ ರಾಜ್ಯಪಾಲರಿಗೆ ಮನವಿ


ಪರಶುರಾಮ ದಿಂಡವಾರ, ಅಶೋಕ ನಡುವಿನಮನಿ, ಮಂಜುನಾಥ ಕಟ್ಟೀಮನಿ, ರಮೇಶ ಹಾಲ್ಯಾಳ, ಹನುಮಂತ ಬಾಗೇವಾಡಿ, ಪ್ರಶಾಂತ ಚಲವಾದಿ, ಶಂಕರ ಅಮೀನಪ್ಪಗೋಳ, ಸಿದ್ದು , ಯಮನೂರಿ ತಳಗೇರಿ, ಕೃಷ್ಣಾ ಅದ್ವಾನಿ, ಮುತ್ತು ನಡುವಿನಮನಿ ಇದ್ದರು.
ಉಪತಹಶೀಲ್ದಾರ್ ಕೆ.ವೈ. ಹೊಸಮನಿ‌ ಮನವಿ ಸ್ವೀಕರಿಸಿದರು. ತಹಶೀಲ್ದಾರ್ ‌ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 6 ಕ್ಕೂ ಹೆಚ್ಚು ನಾನಾ ದಲಿತ ಸಂಘಟನೆಗಳು ಪ್ರತ್ಯೇಕವಾಗಿ ಮನವಿ ಅರ್ಪಿಸಿದರು.

Leave a Reply

Your email address will not be published. Required fields are marked *

You May Also Like

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಕೊರೊನಾ ಖರ್ಚು ವೆಚ್ಚದ ಕುರಿತು ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳು…

ಸಿಂದಗಿ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ

ಉತ್ತರಪ್ರಭ ಸಿಂದಗಿ: ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ  ಶಾಂತಿ ಸಭೆ ಮಾಡಲಾಯಿತು ಸಭೆಯಲ್ಲಿ ಸಿಂದಗಿ…