ಉತ್ತರಪ್ರಭ

ಕಾರಟಗಿ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಯು ಇಂದಿಗೂ ಜೀವಂತವಾಗಿದ್ದು, ಗ್ರಾಮದಲ್ಲಿ ವಾಸಿಸುವ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳಿಗೆ ಇಂದಿಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ಇಲ್ಲದಿರುವುದರಿಂದ, ಸಾಮಾಜಿಕ ನ್ಯಾಯ ಒದಗಿಸಿ, ಸಮಾನತೆ ಅವಕಾಶ ಮಾಡಿಕೊಡುವಂತೆ ಗ್ರಾಮದ ದಲಿತ ಯುವಕರು ಕಾರಟಗಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳು ವಾಸವಾಗಿದ್ದು ಇಂದಿಗೂ ಜಾತಿ ನಿಂದನೆಯಲ್ಲೇ ಬದಕುವಂತಾಗಿದೆ. ಮೊದಲಿನಿಂದಲೂ ಈ ಗ್ರಾಮದಲ್ಲಿ ಸಾರ್ವನಿಕ ಸ್ಥಳಗಳಲ್ಲಿ ದಲಿತರ ಪ್ರವೇಶ ಇಲ್ಲದಂತಾಗಿದೆ. ಗ್ರಾಮದಲ್ಲಿ ಸಂಪೂರ್ಣ ಅಸ್ಪೃಶ್ಯತೆಯು ತಾಂಡವವಾಡುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ದಲಿತ ಕುಟುಂಬಗಳಿಗೆ ನಡೆಸಿಕೊಡಬೇಕೆಂದು ಕಾರಟಗಿಯ ತಹಸೀಲ್ದಾರ್ ರವಿ.ಎಸ್.ಅಂಗಡಿ ಅನುಪಸ್ಥಿತಿಯಲ್ಲಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.

ನಂತರ ಗ್ರಾಮದ ದಲಿತ ಮುಖಂಡ ಮಾರೇಶ್ ಮುಷ್ಟೂರು ಮಾತನಾಡಿ ನಮ್ಮ ಗ್ರಾಮದಲ್ಲಿ ದಲಿತರಿಗೆ ಜಾತಿನಿಂದನೆ ನಡೆಯುತ್ತಿದೆ. ಕಾನೂನು ಕಠಿಣ ಕ್ರಮ ಕೈಗೊಂಡರೂ ಅನೇಕ ಗ್ರಾಮಗಳಲ್ಲಿ ಜಾತಿಯಿಂದ ಅನ್ಯಾಯವಾಗುತ್ತಿದೆ. ಅಸಮಾನತೆಗೆ ಉಂಟಾಗುತ್ತಿದೆ. ಗ್ರಾಮದ ಸೊಸೈಟಿಯಲ್ಲಿಯೂ ಸದಸ್ಯರಾಗಿ ಭಾಗವಹಿಸಲು ಅವಕಾಶ ನೀಡಿಲ್ಲ. ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಾದ ಹೋಟೆಲ್, ಕ್ಷೌರದ ಅಂಗಡಿ, ದೇವಸ್ಥಾನ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರವೇಶವಿಲ್ಲ. ದಲಿತರು ಎನ್ನುವ ಕಾರಣಕ್ಕೆ ಇಂದಿಗೂ ಶೋಷಣೆಗೆ ಹಾಗೂ ಜಾತಿನಿಂದನೆಗೆ ಒಳಗಾಗಿದ್ದೆವೆ, ದಯವಿಟ್ಟು ಇಲ್ಲಿನ ದಲಿತ ಕುಟುಂಬಗಳಿಗೆ ಅನ್ಯಾಯವಾಗುತ್ತಿದ್ದು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಿ ಸಮಾನತೆಯನ್ನು ಸೃಷ್ಟಿಸಬೇಕೆಂದು ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಜಮದಗ್ನಿ, ಯಲ್ಲಪ್ಪ ಕಟ್ಟಿಮನಿ, ಹನುಮೇಶ, ಕುಮಾರಪ್ಪ, ಸೋಮಣ್ಣ, ಪುಟ್ಟಣ್ಣ, ಜಟರಾಜ, ಯಮನೂರ, ಚೆನ್ನಬಸವ, ಚಂದ್ರಶೇಖರ, ಹುಸೇನಪ್ಪ, ಸೋಮಣ್ಣ.ಪಿ, ಬಸವರಾಜ, ರಾಘವೇಂದ್ರ, ರಾಜು, ದುರಗಪ್ಪ, ಮಾರುತಿ ಸೇರಿದಂತೆ ಅನೇಕರು ಇದ್ದರು.

1 comment
Leave a Reply

Your email address will not be published. Required fields are marked *

You May Also Like

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸದ್ಯದಲ್ಲಿಯೇ ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿದೆಯಂತೆ ಬಾಂಗ್ಲಾದೇಶ!

ನವದೆಹಲಿ : ದೇಶದ ಜಿಡಿಪಿ ಕುರಿತು ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮೋದಿ ವಿರುದ್ಧ ಗುಡುಗಿದ್ದಾರೆ.