ಉತ್ತರಪ್ರಭ

ಕಾರಟಗಿ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಯು ಇಂದಿಗೂ ಜೀವಂತವಾಗಿದ್ದು, ಗ್ರಾಮದಲ್ಲಿ ವಾಸಿಸುವ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳಿಗೆ ಇಂದಿಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ಇಲ್ಲದಿರುವುದರಿಂದ, ಸಾಮಾಜಿಕ ನ್ಯಾಯ ಒದಗಿಸಿ, ಸಮಾನತೆ ಅವಕಾಶ ಮಾಡಿಕೊಡುವಂತೆ ಗ್ರಾಮದ ದಲಿತ ಯುವಕರು ಕಾರಟಗಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳು ವಾಸವಾಗಿದ್ದು ಇಂದಿಗೂ ಜಾತಿ ನಿಂದನೆಯಲ್ಲೇ ಬದಕುವಂತಾಗಿದೆ. ಮೊದಲಿನಿಂದಲೂ ಈ ಗ್ರಾಮದಲ್ಲಿ ಸಾರ್ವನಿಕ ಸ್ಥಳಗಳಲ್ಲಿ ದಲಿತರ ಪ್ರವೇಶ ಇಲ್ಲದಂತಾಗಿದೆ. ಗ್ರಾಮದಲ್ಲಿ ಸಂಪೂರ್ಣ ಅಸ್ಪೃಶ್ಯತೆಯು ತಾಂಡವವಾಡುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ದಲಿತ ಕುಟುಂಬಗಳಿಗೆ ನಡೆಸಿಕೊಡಬೇಕೆಂದು ಕಾರಟಗಿಯ ತಹಸೀಲ್ದಾರ್ ರವಿ.ಎಸ್.ಅಂಗಡಿ ಅನುಪಸ್ಥಿತಿಯಲ್ಲಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.

ನಂತರ ಗ್ರಾಮದ ದಲಿತ ಮುಖಂಡ ಮಾರೇಶ್ ಮುಷ್ಟೂರು ಮಾತನಾಡಿ ನಮ್ಮ ಗ್ರಾಮದಲ್ಲಿ ದಲಿತರಿಗೆ ಜಾತಿನಿಂದನೆ ನಡೆಯುತ್ತಿದೆ. ಕಾನೂನು ಕಠಿಣ ಕ್ರಮ ಕೈಗೊಂಡರೂ ಅನೇಕ ಗ್ರಾಮಗಳಲ್ಲಿ ಜಾತಿಯಿಂದ ಅನ್ಯಾಯವಾಗುತ್ತಿದೆ. ಅಸಮಾನತೆಗೆ ಉಂಟಾಗುತ್ತಿದೆ. ಗ್ರಾಮದ ಸೊಸೈಟಿಯಲ್ಲಿಯೂ ಸದಸ್ಯರಾಗಿ ಭಾಗವಹಿಸಲು ಅವಕಾಶ ನೀಡಿಲ್ಲ. ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಾದ ಹೋಟೆಲ್, ಕ್ಷೌರದ ಅಂಗಡಿ, ದೇವಸ್ಥಾನ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರವೇಶವಿಲ್ಲ. ದಲಿತರು ಎನ್ನುವ ಕಾರಣಕ್ಕೆ ಇಂದಿಗೂ ಶೋಷಣೆಗೆ ಹಾಗೂ ಜಾತಿನಿಂದನೆಗೆ ಒಳಗಾಗಿದ್ದೆವೆ, ದಯವಿಟ್ಟು ಇಲ್ಲಿನ ದಲಿತ ಕುಟುಂಬಗಳಿಗೆ ಅನ್ಯಾಯವಾಗುತ್ತಿದ್ದು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಿ ಸಮಾನತೆಯನ್ನು ಸೃಷ್ಟಿಸಬೇಕೆಂದು ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಜಮದಗ್ನಿ, ಯಲ್ಲಪ್ಪ ಕಟ್ಟಿಮನಿ, ಹನುಮೇಶ, ಕುಮಾರಪ್ಪ, ಸೋಮಣ್ಣ, ಪುಟ್ಟಣ್ಣ, ಜಟರಾಜ, ಯಮನೂರ, ಚೆನ್ನಬಸವ, ಚಂದ್ರಶೇಖರ, ಹುಸೇನಪ್ಪ, ಸೋಮಣ್ಣ.ಪಿ, ಬಸವರಾಜ, ರಾಘವೇಂದ್ರ, ರಾಜು, ದುರಗಪ್ಪ, ಮಾರುತಿ ಸೇರಿದಂತೆ ಅನೇಕರು ಇದ್ದರು.

1 comment
Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 35 ನೇ ವಾರ್ಡ ಬಿಜೆಪಿ ಪಾಲಿಗೆ

ಗದಗ ಬೇಟಗೇರಿ:ನಗರ ಸಭೆ 35ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 35ನೇ  ವಾರ್ಡನಲ್ಲಿ ಬಿಜೆಪಿಗೆ…

ಕುರಿಗಾಹಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರಾಜ್ಯದಲ್ಲಿ ಕುರಿಗಾಹಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಸ್ಥಳೀಯ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟಿಸಿಇ ಹ್ಯಾಕಥಾನ್

ಗದಗ: ಇಂದು ಪ್ರತಿಯೊಬ್ಬರ ಜೀವನದಲ್ಲಿ ತಾಂತ್ರಿಕತೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ರಂಗದಲ್ಲಿ ತಾಂತ್ರಿಕತೆ ಅವಶ್ಯವಾಗಿದ್ದು ತಾಂತ್ರಿಕತೆ…

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.