ಉತ್ತರಪ್ರಭ

ಕಾರಟಗಿ: ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಯು ಇಂದಿಗೂ ಜೀವಂತವಾಗಿದ್ದು, ಗ್ರಾಮದಲ್ಲಿ ವಾಸಿಸುವ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳಿಗೆ ಇಂದಿಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರವೇಶ ಇಲ್ಲದಿರುವುದರಿಂದ, ಸಾಮಾಜಿಕ ನ್ಯಾಯ ಒದಗಿಸಿ, ಸಮಾನತೆ ಅವಕಾಶ ಮಾಡಿಕೊಡುವಂತೆ ಗ್ರಾಮದ ದಲಿತ ಯುವಕರು ಕಾರಟಗಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ 85ಕ್ಕೂ ಹೆಚ್ಚು ಮಾದಿಗ ಸಮುದಾಯದ ಕುಟುಂಬಗಳು ವಾಸವಾಗಿದ್ದು ಇಂದಿಗೂ ಜಾತಿ ನಿಂದನೆಯಲ್ಲೇ ಬದಕುವಂತಾಗಿದೆ. ಮೊದಲಿನಿಂದಲೂ ಈ ಗ್ರಾಮದಲ್ಲಿ ಸಾರ್ವನಿಕ ಸ್ಥಳಗಳಲ್ಲಿ ದಲಿತರ ಪ್ರವೇಶ ಇಲ್ಲದಂತಾಗಿದೆ. ಗ್ರಾಮದಲ್ಲಿ ಸಂಪೂರ್ಣ ಅಸ್ಪೃಶ್ಯತೆಯು ತಾಂಡವವಾಡುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ದಲಿತ ಕುಟುಂಬಗಳಿಗೆ ನಡೆಸಿಕೊಡಬೇಕೆಂದು ಕಾರಟಗಿಯ ತಹಸೀಲ್ದಾರ್ ರವಿ.ಎಸ್.ಅಂಗಡಿ ಅನುಪಸ್ಥಿತಿಯಲ್ಲಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.

ನಂತರ ಗ್ರಾಮದ ದಲಿತ ಮುಖಂಡ ಮಾರೇಶ್ ಮುಷ್ಟೂರು ಮಾತನಾಡಿ ನಮ್ಮ ಗ್ರಾಮದಲ್ಲಿ ದಲಿತರಿಗೆ ಜಾತಿನಿಂದನೆ ನಡೆಯುತ್ತಿದೆ. ಕಾನೂನು ಕಠಿಣ ಕ್ರಮ ಕೈಗೊಂಡರೂ ಅನೇಕ ಗ್ರಾಮಗಳಲ್ಲಿ ಜಾತಿಯಿಂದ ಅನ್ಯಾಯವಾಗುತ್ತಿದೆ. ಅಸಮಾನತೆಗೆ ಉಂಟಾಗುತ್ತಿದೆ. ಗ್ರಾಮದ ಸೊಸೈಟಿಯಲ್ಲಿಯೂ ಸದಸ್ಯರಾಗಿ ಭಾಗವಹಿಸಲು ಅವಕಾಶ ನೀಡಿಲ್ಲ. ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಾದ ಹೋಟೆಲ್, ಕ್ಷೌರದ ಅಂಗಡಿ, ದೇವಸ್ಥಾನ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರವೇಶವಿಲ್ಲ. ದಲಿತರು ಎನ್ನುವ ಕಾರಣಕ್ಕೆ ಇಂದಿಗೂ ಶೋಷಣೆಗೆ ಹಾಗೂ ಜಾತಿನಿಂದನೆಗೆ ಒಳಗಾಗಿದ್ದೆವೆ, ದಯವಿಟ್ಟು ಇಲ್ಲಿನ ದಲಿತ ಕುಟುಂಬಗಳಿಗೆ ಅನ್ಯಾಯವಾಗುತ್ತಿದ್ದು ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಿ ಸಮಾನತೆಯನ್ನು ಸೃಷ್ಟಿಸಬೇಕೆಂದು ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಜಮದಗ್ನಿ, ಯಲ್ಲಪ್ಪ ಕಟ್ಟಿಮನಿ, ಹನುಮೇಶ, ಕುಮಾರಪ್ಪ, ಸೋಮಣ್ಣ, ಪುಟ್ಟಣ್ಣ, ಜಟರಾಜ, ಯಮನೂರ, ಚೆನ್ನಬಸವ, ಚಂದ್ರಶೇಖರ, ಹುಸೇನಪ್ಪ, ಸೋಮಣ್ಣ.ಪಿ, ಬಸವರಾಜ, ರಾಘವೇಂದ್ರ, ರಾಜು, ದುರಗಪ್ಪ, ಮಾರುತಿ ಸೇರಿದಂತೆ ಅನೇಕರು ಇದ್ದರು.

1 comment
Leave a Reply

Your email address will not be published. Required fields are marked *

You May Also Like

ಕಮಿಶನ್ ಗೆ ಒಳಗಾಗಿ ಗಣಿಗಾರಿಕೆಗೆ ಅವಕಾಶ ಬೇಡ: ತೋಂಟದ ಶ್ರೀಗಳು

ಗದಗ: ಕಪ್ಪತ್ತಗುಡ್ಡ ನಾಶವಾದರೆ ಈ ಭಾಗ ಮರಭೂಮಿಯಾಗುತ್ತದೆ. ಬಲ್ದೋಟದಂತಹ ಕಂಪನಿ ಸರ್ಕಾರದ ಮೇಲೆ ಪ್ರಭಾವ ಬೀರುತ್ತವೆ.…

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ಶಾಲೆ ತೆರೆಯಬಾರದು ಎನ್ನುವುದಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.