ಶಿರಹಟ್ಟಿ:

ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಾಲೆ ಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ನೇಮಕವಾಗಿರುವುದು ಈ ಭಾಗದ ಜನತೆಗೆ ಸಂತಸ ತಂದಿದೆ ಎಂದು ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಲಿಂಗ ಹೊಂಬಾಳಿ ಮಠ ಹೇಳಿದ್ದಾರೆ.

ಶಿರಹಟ್ಟಿ ಪಕಿರೇಶ್ವರ ಮಠಕ್ಕೆ ಗತವೈಭವವನ್ನು ಸಾರುವುದರ ಮೂಲಕ ದೇಶದಲ್ಲಿಯೇ ಹಿಂದೂ ಮುಸ್ಲಿಂ ಸಂಪ್ರದಾಯವನ್ನು ಶತ ಶತಮಾನಗಳಿಂದ ಅಳವಡಿಸಿಕೊಂಡು ಇಂದಿಗೂ ಸಹ ಮಠದ ಪ್ರತಿಯೊಂದು ಆಚರಣೆಯೂ ದಿನ ನಿತ್ಯ ಹಿಂದೂ ಮುಸ್ಲಿಂ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಶಿರಹಟ್ಟಿ ಪಕೀರೇಶ್ವರ ಮಠಕ್ಕೆ ಬಾಳೆಹೊಸೂರಿನ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವುದು ನಾಡಿನ ಜನರಿಗೆ ಹರ್ಷ ತಂದಿದೆ.

ಬಾಳೆ ಹೊಸೂರಿನ ಗ್ರಾಮದ ಪ್ರತಿಯೊಂದು ಮನೆಗೆ ದಿಂಗಾಲೇಶ್ವರ ಸ್ವಾಮಿಗಳು ಭೇಟಿ ನೀಡಿ ಸ್ವಚ್ಚತೆ, ನೈರ್ಮಲ್ಯ, ಶೌಚಾಲಯದ ಬಳಕೆ ಬಗ್ಗೆ ಜನ ಜಾಗೃತಿ ಮೂಡಿಸಿ, ಸ್ವಾಮೀಜಿಗಳು ಜನರ ದುಶ್ಚಟ್ಟಗಳನ್ನು ಜೋಳಿಗೆಗೆ ಹಾಕಿಸುವ ಮೂಲಕ ಸಮಾಜದ ಸುಧಾರಣೆಗೆ ದಿಂಗಾಲೇಶ್ವರ ಸ್ವಾಮೀಜಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು ಎಂದು ಸಿದ್ದಲಿಂಗಯ್ಯ ಹೊಂಬಾಳಿ ಮಠ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಮಾಗಡಿಯಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ

ತಾಲೂಕಿನ ಮಾಗಡಿ ಗ್ರಾಮದ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಮಾಗಡಿಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ ಜರುಗಿತು.

ಸಂಘಟನಾ ಶಕ್ತಿಯಿಂದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ

ಒಗ್ಗಟ್ಟು ಮತ್ತು ಸಂಘಟನಾ ಶಕ್ತಿಯಿಂದ ಧೈರ್ಯ, ಆತ್ಮವಿಶ್ವಾಸ ಹೆಚ್ಚಿ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ ಎಂದು ಮಾಜಿ ಶಾಸಕ ಎಸ್.ಎನ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.