ಶಿರಹಟ್ಟಿ:

ಹಿಂದೂ ಮುಸ್ಲಿಮ್ ಭಾವೈಕ್ಯತೆಗೆ ಹಾಗೂ ಕೋಮು ಸೌಹಾರ್ದತೆಗೆ ಹೆಸರಾಗಿರುವ ಶಿರಹಟ್ಟಿ ಪಕೀರೇಶ್ವರ ಸಂಸ್ಥಾನ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಾಲೆ ಹೊಸೂರಿನ ದಿಂಗಾಲೇಶ್ವರ ಸ್ವಾಮಿಗಳು ನೇಮಕವಾಗಿರುವುದು ಈ ಭಾಗದ ಜನತೆಗೆ ಸಂತಸ ತಂದಿದೆ ಎಂದು ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಲಿಂಗ ಹೊಂಬಾಳಿ ಮಠ ಹೇಳಿದ್ದಾರೆ.

ಶಿರಹಟ್ಟಿ ಪಕಿರೇಶ್ವರ ಮಠಕ್ಕೆ ಗತವೈಭವವನ್ನು ಸಾರುವುದರ ಮೂಲಕ ದೇಶದಲ್ಲಿಯೇ ಹಿಂದೂ ಮುಸ್ಲಿಂ ಸಂಪ್ರದಾಯವನ್ನು ಶತ ಶತಮಾನಗಳಿಂದ ಅಳವಡಿಸಿಕೊಂಡು ಇಂದಿಗೂ ಸಹ ಮಠದ ಪ್ರತಿಯೊಂದು ಆಚರಣೆಯೂ ದಿನ ನಿತ್ಯ ಹಿಂದೂ ಮುಸ್ಲಿಂ ಸಂಪ್ರದಾಯದಂತೆ ನಡೆದುಕೊಂಡು ಬಂದಿದೆ. ಶಿರಹಟ್ಟಿ ಪಕೀರೇಶ್ವರ ಮಠಕ್ಕೆ ಬಾಳೆಹೊಸೂರಿನ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವುದು ನಾಡಿನ ಜನರಿಗೆ ಹರ್ಷ ತಂದಿದೆ.

ಬಾಳೆ ಹೊಸೂರಿನ ಗ್ರಾಮದ ಪ್ರತಿಯೊಂದು ಮನೆಗೆ ದಿಂಗಾಲೇಶ್ವರ ಸ್ವಾಮಿಗಳು ಭೇಟಿ ನೀಡಿ ಸ್ವಚ್ಚತೆ, ನೈರ್ಮಲ್ಯ, ಶೌಚಾಲಯದ ಬಳಕೆ ಬಗ್ಗೆ ಜನ ಜಾಗೃತಿ ಮೂಡಿಸಿ, ಸ್ವಾಮೀಜಿಗಳು ಜನರ ದುಶ್ಚಟ್ಟಗಳನ್ನು ಜೋಳಿಗೆಗೆ ಹಾಕಿಸುವ ಮೂಲಕ ಸಮಾಜದ ಸುಧಾರಣೆಗೆ ದಿಂಗಾಲೇಶ್ವರ ಸ್ವಾಮೀಜಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು ಎಂದು ಸಿದ್ದಲಿಂಗಯ್ಯ ಹೊಂಬಾಳಿ ಮಠ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ಪ್ರಥಮ

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.

ಮುಖಕ್ಕೆ ಮಾಸ್ಕ ಧರಿಸದಿದ್ದರೆ 250 ರೂ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ ಧರಿಸದೆ ಇರುವದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 250 ರೂ, ದಂಡ.