ವರದಿ: ವಿಠಲ ಕೆಳೂತ್


ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಪಟ್ಟಣದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಸರ್ವ ಸದಸ್ಯರ ಒಮ್ಮತ್ತದಿಂದ ಹುಸೇನಸಾಬ ಇಲಕಲ್ಲ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಕರಿಯಪ್ಪ(ಉಪಾಧ್ಯಕ್ಷ) ಮಲ್ಲಿಕಾರ್ಜುನ(ಗೌರವಧ್ಯಕ್ಷ) ಶಂಕರಸಿಂಗ್(ಪ್ರಧಾನ ಕಾರ್ಯದರ್ಶಿ) ಚಂದು ಮುರಾರಿ(ಜಂಟಿ ಕಾರ್ಯದರ್ಶಿ) ಚಂದ್ರಸ್ವಾಮಿ(ಖಜಾಂಚಿ) ಇರ್ಫಾನ್( ಜಂಟಿ ಖಜಾಂಚಿ) ಕಾರ್ಯಕಾರಣಿ ಸದಸ್ಯರನ್ನಾಗಿ ಮೆಹಬೂಬ್ ಸಾಬ, ಮಾಲಸಾಬ ಗಾದಿ, ಸದ್ದಾಂ ಜಂಡಕಟ್ಟೆ, ಮೌಲಸಾಬ ಛತ್ತಿ ಅವರನ್ನು ಆಯ್ಕೆ ಮಾಡಲಾಯಿತು.
ಈ ವೇಳೆ ನೂತನವಾಗಿ ಆಯ್ಕೆಯಾದ ತಾಲೂಕು ಅಧ್ಯಕ್ಷ ಹುಸೇನಸಾಬ ಇಲಕಲ್ಲ ಅವರು ಮಾತನಾಡಿ, ರಾಜ್ಯದಲ್ಲಿನ ಮೋಟಾರ ರಿವೈಂಡಿಗ್ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಕೆಲಸದಲ್ಲಿ ನಿರತರಾದ ಕಾರ್ಮಿಕರಿಗೆ ಭದ್ರತೆ ಇಲ್ಲ. ಸರಕಾರದಿಂದ ಯಾವುದೇ ರೀತಿ ಸೌಲಭ್ಯ ಸಿಗುತ್ತಿಲ್ಲ.‌ ಹೀಗಾಗಿ ನಾವೆಲ್ಲರೂ ಒಗ್ಗಟ್ಟು ಆಗೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ರಿವೈಂಡಿಗ್ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ,ಕಾರ್ಯಕಾರಿ ಸದಸ್ಯ ಈಶ್ವರಪ್ಪ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

15 ತಿಂಗಳ ಮಗುವನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ತಾಯಿ!

ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.

ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ: ಎಚ್.ಡಿ.ಕೆ

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.