ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ ಗಾಯಕ ಇಬ್ರಾಹಿಂ ಸುತಾರ(76) ವಿಧಿವಶರಾಗಿದ್ದಾರೆ. ತಮ್ಮ ಪ್ರವಚನ ಮತ್ತು ಸಂವಾದಗಳ ಮೂಲಕ ಹಿಂದೂ-ಮುಸ್ಲೀಮರ ಮಧ್ಯೆ ಭಾವೈಕ್ಯತೆಯನ್ನು ಹರಡಿದವರು. ಲಿಂಗೈಕ್ಯ ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಭಕ್ತರಲ್ಲಿ ಒಬ್ಬರಾಗಿದ್ದ ಇಬ್ರಾಹಿಂ ಸುತಾರ್. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ಇವರ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿ. ಇವರ ತಂದೆ ಬಡಗಿ ವೃತ್ತಿಯನ್ನು ಮಾಡಿಕೊಂಡಿದ್ದು, ಬಡ ಕುಟುಂಬದಲ್ಲಿ ಜನಿಸಿದ ಇಬ್ರಾಹಿಂ ಸುತಾರ ಅವರಿಗೆ ಓದಲು ಸಾಧ್ಯವಾಗಲಿಲ್ಲ.


ಮೂರನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ ಇಬ್ರಾಹಿಂ ಸುತಾರರು, ಮಹಾಲಿಂಗಪುರದ ಬಹುಸಂಖ್ಯಾತರು ಮಾಡುತ್ತಿದ್ದ ನೇಕಾರಿಕೆಯನ್ನೇ ಕಲಿತುಕೊಂಡರು. ತದನಂತರದಲ್ಲಿ ನೇಕಾರಿಕೆಯನ್ನೇ ತಮ್ಮ ಉದ್ಯೋಗವಾಗಿ ಆರಿಸಿಕೊಂಡಿದ್ದರು.

ಬಾಲ್ಯದಲ್ಲಿ ಕುರಾನ್ ಅಧ್ಯಯನ ಚಿಕ್ಕಂದಿನಲ್ಲೇ ಮಸೀದಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಇಬ್ರಾಹಿಂ ಸುತಾರ, ಧರ್ಮಗುರುಗಳ ಮಾರ್ಗದರ್ಶನದಲ್ಲಿ ಕುರಾನ್ ಅಧ್ಯಯನ ಮಾಡಿಕೊಂಡರು. ಈ ವೇಳೆ ಬೇರೆ ಧರ್ಮಗ್ರಂಥಗಳಲ್ಲಿ ಸಾರವನ್ನು ತಿಳಿದುಕೊಳ್ಳುವ ಆಸೆ ಚಿಗುರಿತು. ಊರಿನಲ್ಲಿದ್ದ ಸಾಧುವಿನ ಭಜನಾ ಸಂಘ ಬೆಂಬಲ ನೀಡಿತು. ಧಾರ್ಮಿಕರ ಜೊತೆಯಲ್ಲಿ ತತ್ವಪದ ಮತ್ತು ವಚನಗಳನ್ನು ಕಲಿತುಕೊಂಡರು. .

ರಾಜ್ಯ ಮತ್ತು ದೇಶದ ಜನರಲ್ಲಿ ಭಾವೈಕ್ಯತೆಯನ್ನು ಸಾರುವ ಪ್ರವಚನಗಳನ್ನು ಮಾಡಿ ಜನರಲ್ಲಿ ಭಾವೈಕ್ಯತೆಯ ಭಾವನೆಯನ್ನು ಬಿತ್ತಿದ್ದಾರೆ. ಅವರು ಪ್ರವಚನಗಳ ಮೂಲಕ ಜನಮನ ಗೆದ್ದವರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದರು.ಇಬ್ರಾಹಿಂ ಸುತಾರ ನಿಧನಕ್ಕೆ ಅನೇಕ ಗಣ್ಯರ ಸಂತಾಪ ಸೂಚಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.

ಗದಗ ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್!: ಒಂದು ಸಾವು

ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.