ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾ ಮಾಡಬೇಕು. ಎಂದು ಆಗ್ರಹಿಸಿ ಡಾ.ಬಾಬು ಜಗಜೀವನರಾಮ ವಿವಿಧೋದ್ದೇಶಗಳ ಅಭಿವೃದ್ದಿ ಸಂಘ ವತಿಯಿಂದ ಪಪಂ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಅವರ ಮೂಲಕ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಿದರು.


ಗಣರಾಜ್ಯೋತ್ಸವ ದಿನ ರಾಯಚೂರ ಜಿಲ್ಲಾ ನ್ಯಾಯಾಧೀಶ ಸಾಂವಿಧಾನಿಕ ಹುದ್ದೆಯಲ್ಲಿ ಇದ್ದುಕೊಂಡು ಪೂರ್ವಾಗ್ರಹ ಪೀಡಿತರಾಗಿ ಅವರ ವೃತ್ತಿಗೆ ಅಗೌರವ ರೀತಿಯಲ್ಲಿ ನಡೆದುಕೊಂಡಿದ್ದು ತೀವ್ರ ಖಂಡನೀಯ. ನ್ಯಾಯಾಧೀಶರ ಹುದ್ದೆಯಿಂದ ಅವರನ್ನ ವಜಾ ಮಾಡಬೇಕು ಮತ್ತು ರಾಜ್ಯದ ಎಲ್ಲಾ ನ್ಯಾಯಾಲಯದ ಮುಂದೆ ಅಂಬೇಡ್ಕರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಕೂಡಲೆ ಆದೇಶ ಹೊರಡಿಸಬೇಕು. ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಂತೇಶ ನಡುಗೇರಿ, ಉಪಾಧ್ಯಕ್ಷ ಎಂ.ಎನ್.ನಡುಗೇರಿ, ಪ್ರಕಾಶ ಗಡದವರ, ಸಂತೋಷ ಜಾಲಣ್ಣವರ, ಬಸವರಾಜ ನಡುಗೇರಿ, ಮಹಾಂತೇಶ ತಳಗೇರಿ, ಸಂತೋಷ ದೊಡ್ಡಮನಿ, ದೇವಪ್ಪ ನಡುಗೇರಿ, ಪ್ರಕಾಶ ನಡುಗೇರಿ, ಸುಭಾಸ ಜಾಲಣ್ಣವರ, ಪರಸಪ್ಪ ಜಾಲಣ್ಣವರ ಮೊದಲಾದವರು ಇದ್ದರು.

ಮುಳಗುಂದ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಡಿಎಸ್‍ಎಸ್ ಸಂಘಟನೆ ವತಿಯಿಂದ ಪಪಂ ಮುಖ್ಯಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.

ಗದಗ ಆಗಮಿಸಿದ ಸಿಎಂ ಬೊಮ್ಮಾಯಿ

ಉತ್ತರಪ್ರಭ ಗದಗ: ಇಂದು ಗದುಗಿನ ಲಿಂಗೈಕ್ಯ. ಡಾ ಶ್ರೀ ತೋಂಟದ ಸಿದ್ದಲಿಂಗ ಶ್ರೀ ಗಳ ಐಕ್ಯಮಂಟಪದ…

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಣೆ: ಕೊತಬಾಳ ಗ್ರಾಪಂ ನಿರ್ದಾರ

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಏನೆಲ್ಲ ನಿರ್ಧಾರಗಳನ್ನು ತೆಗೆದುಕೊಂಡರೂ ಜನರು ಮಾತ್ರ ಇನ್ನು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಒಂದು ಮನಸ್ಸು ಮಾಡಿದ್ರೆ ಏನೆಲ್ಲವೂ ಸಾಧ್ಯ ಅನ್ನೋದು ತೋರಿಸಿಕೊಟ್ಟಿದೆ ಆ ಊರಿನ ಗ್ರಾಮ ಪಂಚಾಯತಿ.