ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾ ಮಾಡಬೇಕು. ಎಂದು ಆಗ್ರಹಿಸಿ ಡಾ.ಬಾಬು ಜಗಜೀವನರಾಮ ವಿವಿಧೋದ್ದೇಶಗಳ ಅಭಿವೃದ್ದಿ ಸಂಘ ವತಿಯಿಂದ ಪಪಂ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಅವರ ಮೂಲಕ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಿದರು.


ಗಣರಾಜ್ಯೋತ್ಸವ ದಿನ ರಾಯಚೂರ ಜಿಲ್ಲಾ ನ್ಯಾಯಾಧೀಶ ಸಾಂವಿಧಾನಿಕ ಹುದ್ದೆಯಲ್ಲಿ ಇದ್ದುಕೊಂಡು ಪೂರ್ವಾಗ್ರಹ ಪೀಡಿತರಾಗಿ ಅವರ ವೃತ್ತಿಗೆ ಅಗೌರವ ರೀತಿಯಲ್ಲಿ ನಡೆದುಕೊಂಡಿದ್ದು ತೀವ್ರ ಖಂಡನೀಯ. ನ್ಯಾಯಾಧೀಶರ ಹುದ್ದೆಯಿಂದ ಅವರನ್ನ ವಜಾ ಮಾಡಬೇಕು ಮತ್ತು ರಾಜ್ಯದ ಎಲ್ಲಾ ನ್ಯಾಯಾಲಯದ ಮುಂದೆ ಅಂಬೇಡ್ಕರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಕೂಡಲೆ ಆದೇಶ ಹೊರಡಿಸಬೇಕು. ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಂತೇಶ ನಡುಗೇರಿ, ಉಪಾಧ್ಯಕ್ಷ ಎಂ.ಎನ್.ನಡುಗೇರಿ, ಪ್ರಕಾಶ ಗಡದವರ, ಸಂತೋಷ ಜಾಲಣ್ಣವರ, ಬಸವರಾಜ ನಡುಗೇರಿ, ಮಹಾಂತೇಶ ತಳಗೇರಿ, ಸಂತೋಷ ದೊಡ್ಡಮನಿ, ದೇವಪ್ಪ ನಡುಗೇರಿ, ಪ್ರಕಾಶ ನಡುಗೇರಿ, ಸುಭಾಸ ಜಾಲಣ್ಣವರ, ಪರಸಪ್ಪ ಜಾಲಣ್ಣವರ ಮೊದಲಾದವರು ಇದ್ದರು.

ಮುಳಗುಂದ ರಾಯಚೂರ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಡಿಎಸ್‍ಎಸ್ ಸಂಘಟನೆ ವತಿಯಿಂದ ಪಪಂ ಮುಖ್ಯಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ತಾ.ಪಂ ಇಒ ಲಂಚ ಪಡೆಯುವ ವೇಳೆ ಎಸಿಬಿ ದಾಳಿ

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ತಾ.ಪಂ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಾ.ಪಂ ಇಒ ಜನರಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಇಒ ಸಿಕ್ಕಿಬಿದ್ದಿದ್ದಾನೆ.

ಹೊರರಾಜ್ಯಗಳಿಂದ ಬಂದವರ ಮನೆಗಳ ಸೀಲ್ಡೌನ್ ಗೆ ಚಿಂತನೆ.!

ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…

ಜೆಡಿಎಸ್ ಸ್ಥಾನ ಕಬಳಿಸಲು ಬಿಜೆಪಿ ಹೊಂಚು – ರೇವಣ್ಣ!

ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.