ಉತ್ತರಪ್ರಭ

ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಗಾಂಜಾವನ್ನ ಸಾಗಾಣಿಕೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಮೂಲತಃ ಸೋಲಾಪುರದವರಾಗಿದ್ದು ಆರೋಪಿತರ ಹತ್ತಿರವಿದ್ದ 41.8 ಕೆಜಿ ಗಾಂಜಾ ಹಾಗೂ ಒಂದು ಸೈಕಲ್ ಮೋಟಾರನ್ನ ಪೋಲಿಸ್ ಇಲಾಖೆ ವಶಪಡಿಸಿಕೊಂಡಿದೆ. ಈ ಪ್ರಕರಣವನ್ನ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಲಬುರಗಿ ಜಿಲ್ಲೆಯ ಪೋಲಿಸ್ ಅಧೀಕ್ಷಕರಾದ ಇಶಾ ಪಂತ್, ಹೆಚ್ಚುವರಿ ಪೋಲಿಸ್ ಅಧಿಕ್ಷಕ ಪ್ರಸನ್ನ ದೇಸಾಯಿ, ಶಿಲವಂತ S.H. ಪೋಲಿಸ್ ಉಪಾಧಿಕ್ಷಕ . ಜೇವರ್ಗಿ ಸಿಪಿಐ M ಶಿವಪ್ರಸಾದ. ನೆಲೋಗಿ ಪೋಲಿಸ್ ಠಾಣೆ ಪಿಎಸ್ಐ  ರಾಜಕುಮಾರ ಜಾಮಗೊಂಡ. ಪೋಲಿಸ್ ಸಿಬ್ಬಂದಿ ಗುರುಬಸಪ್ಪ ಎ ಎಸ್ ಐ. ಶಿವಪ್ಪ HC. ಸೋಮಶೇಖರ್ HC. ಚಂದ್ರಾಮ HC. ರಾಜಕುಮಾರ್ CPC. ಶಿವರಾಯ CPC ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಆಸ್ಪತ್ರೆಯಲ್ಲಿನ ಬಹುತೇಕ ಸಿಬ್ಬಂದಿಗೆ ಕೊರೊನಾ!

ಮುಂಬಯಿ: ಇಲ್ಲಿಯ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯ ಸಾಯನ್‌ ತಿಲಕ್‌ ಆಸ್ಪತ್ರೆಯ 92 ಜನ ವೈದ್ಯರು ಹಾಗೂ ಏಳು ಜನ ತರಬೇತಿ ಪಡೆಯುತ್ತಿದ್ದ ವೈದ್ಯರಿಗೆ ಸೋಂಕು ತಗುಲಿದೆ.

ಗದಗ ಆಗಮಿಸಿದ ಸಿಎಂ ಬೊಮ್ಮಾಯಿ

ಉತ್ತರಪ್ರಭ ಗದಗ: ಇಂದು ಗದುಗಿನ ಲಿಂಗೈಕ್ಯ. ಡಾ ಶ್ರೀ ತೋಂಟದ ಸಿದ್ದಲಿಂಗ ಶ್ರೀ ಗಳ ಐಕ್ಯಮಂಟಪದ…

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್

ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.