ಉತ್ತರಪ್ರಭ

ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಗಾಂಜಾವನ್ನ ಸಾಗಾಣಿಕೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಮೂಲತಃ ಸೋಲಾಪುರದವರಾಗಿದ್ದು ಆರೋಪಿತರ ಹತ್ತಿರವಿದ್ದ 41.8 ಕೆಜಿ ಗಾಂಜಾ ಹಾಗೂ ಒಂದು ಸೈಕಲ್ ಮೋಟಾರನ್ನ ಪೋಲಿಸ್ ಇಲಾಖೆ ವಶಪಡಿಸಿಕೊಂಡಿದೆ. ಈ ಪ್ರಕರಣವನ್ನ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಲಬುರಗಿ ಜಿಲ್ಲೆಯ ಪೋಲಿಸ್ ಅಧೀಕ್ಷಕರಾದ ಇಶಾ ಪಂತ್, ಹೆಚ್ಚುವರಿ ಪೋಲಿಸ್ ಅಧಿಕ್ಷಕ ಪ್ರಸನ್ನ ದೇಸಾಯಿ, ಶಿಲವಂತ S.H. ಪೋಲಿಸ್ ಉಪಾಧಿಕ್ಷಕ . ಜೇವರ್ಗಿ ಸಿಪಿಐ M ಶಿವಪ್ರಸಾದ. ನೆಲೋಗಿ ಪೋಲಿಸ್ ಠಾಣೆ ಪಿಎಸ್ಐ  ರಾಜಕುಮಾರ ಜಾಮಗೊಂಡ. ಪೋಲಿಸ್ ಸಿಬ್ಬಂದಿ ಗುರುಬಸಪ್ಪ ಎ ಎಸ್ ಐ. ಶಿವಪ್ಪ HC. ಸೋಮಶೇಖರ್ HC. ಚಂದ್ರಾಮ HC. ರಾಜಕುಮಾರ್ CPC. ಶಿವರಾಯ CPC ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

You May Also Like

ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ: ಎಚ್.ಡಿ.ಕೆ

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಶಾಸಕರಿಗಿಂತ ಹಿಂಬಾಲಕನದ್ದೆ ಆವಾಜ್…! ಬಸವಂತರಾಯ್ ವಿರುದ್ಧ ಜನರ ಆಕ್ರೋಶ

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಅವರ ಹಿಂಬಾಲಕ ಬಸವಂತರಾಯ್ ಕುರಿ…

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.