ಉತ್ತರಪ್ರಭ

ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಗಾಂಜಾವನ್ನ ಸಾಗಾಣಿಕೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಮೂಲತಃ ಸೋಲಾಪುರದವರಾಗಿದ್ದು ಆರೋಪಿತರ ಹತ್ತಿರವಿದ್ದ 41.8 ಕೆಜಿ ಗಾಂಜಾ ಹಾಗೂ ಒಂದು ಸೈಕಲ್ ಮೋಟಾರನ್ನ ಪೋಲಿಸ್ ಇಲಾಖೆ ವಶಪಡಿಸಿಕೊಂಡಿದೆ. ಈ ಪ್ರಕರಣವನ್ನ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಲಬುರಗಿ ಜಿಲ್ಲೆಯ ಪೋಲಿಸ್ ಅಧೀಕ್ಷಕರಾದ ಇಶಾ ಪಂತ್, ಹೆಚ್ಚುವರಿ ಪೋಲಿಸ್ ಅಧಿಕ್ಷಕ ಪ್ರಸನ್ನ ದೇಸಾಯಿ, ಶಿಲವಂತ S.H. ಪೋಲಿಸ್ ಉಪಾಧಿಕ್ಷಕ . ಜೇವರ್ಗಿ ಸಿಪಿಐ M ಶಿವಪ್ರಸಾದ. ನೆಲೋಗಿ ಪೋಲಿಸ್ ಠಾಣೆ ಪಿಎಸ್ಐ  ರಾಜಕುಮಾರ ಜಾಮಗೊಂಡ. ಪೋಲಿಸ್ ಸಿಬ್ಬಂದಿ ಗುರುಬಸಪ್ಪ ಎ ಎಸ್ ಐ. ಶಿವಪ್ಪ HC. ಸೋಮಶೇಖರ್ HC. ಚಂದ್ರಾಮ HC. ರಾಜಕುಮಾರ್ CPC. ಶಿವರಾಯ CPC ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಂದಾಗಿ ನಲುಗಿದ ಭಾರತಕ್ಕೆ ನೆರವು ನೀಡುವುದಾಗಿ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶದಲ್ಲಿ ಪ್ರಕಟ

ದೇಶ ಕೊರೋನಾ ಸೋಂಕಿನಿಂದ ನಲಗುತ್ತಿದ್ದು, ದೇಶಕ್ಕೆ ಅಗತ್ಯ ನೆರವು ನೀಡುವುದಾಗಿ ಅಮೆರಿಕ ಸರ್ಕಾರ ಪ್ರಕಟಿಸಿದೆ ಎಂದು ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶ ಪ್ರಕಟಿಸಿದೆ.

ಸರ್ಕಾರ ಕೊಟ್ರೆ ಮಾತ್ರ ಬಿಎಂಟಿಸಿ ನೌಕರರಿಗೆ ಸಂಬಳ..?

ಲಾಕ್ ಡೌನ್ ಹಿನ್ನೆಲೆ ಮಾ.23 ರಿಂದ ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಬಂದ್ ಆಗಿತ್ತು. ಈಗಾಗಲೇ ಮಾರ್ಚ್ ಹಾಗೂ ಏಪ್ರೀಲ್ ತಿಂಗಳ ಸಂಬಳ ನೀಡಲಾಗಿದೆ. ಆದರೆ ಮೇ ತಿಂಗಳ ಸಂಬಳವೇ ಸಿಬ್ಬಂಧಿಗಳಲ್ಲಿ ಆತಂಕ ಮೂಡಿಸಿದೆ.

17 ಜನ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ ಅಧಿಕಾರಿಗಳು!

ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.