ಉತ್ತರಪ್ರಭ

ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಗಾಂಜಾವನ್ನ ಸಾಗಾಣಿಕೆ ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರು ಮೂಲತಃ ಸೋಲಾಪುರದವರಾಗಿದ್ದು ಆರೋಪಿತರ ಹತ್ತಿರವಿದ್ದ 41.8 ಕೆಜಿ ಗಾಂಜಾ ಹಾಗೂ ಒಂದು ಸೈಕಲ್ ಮೋಟಾರನ್ನ ಪೋಲಿಸ್ ಇಲಾಖೆ ವಶಪಡಿಸಿಕೊಂಡಿದೆ. ಈ ಪ್ರಕರಣವನ್ನ ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕಲಬುರಗಿ ಜಿಲ್ಲೆಯ ಪೋಲಿಸ್ ಅಧೀಕ್ಷಕರಾದ ಇಶಾ ಪಂತ್, ಹೆಚ್ಚುವರಿ ಪೋಲಿಸ್ ಅಧಿಕ್ಷಕ ಪ್ರಸನ್ನ ದೇಸಾಯಿ, ಶಿಲವಂತ S.H. ಪೋಲಿಸ್ ಉಪಾಧಿಕ್ಷಕ . ಜೇವರ್ಗಿ ಸಿಪಿಐ M ಶಿವಪ್ರಸಾದ. ನೆಲೋಗಿ ಪೋಲಿಸ್ ಠಾಣೆ ಪಿಎಸ್ಐ  ರಾಜಕುಮಾರ ಜಾಮಗೊಂಡ. ಪೋಲಿಸ್ ಸಿಬ್ಬಂದಿ ಗುರುಬಸಪ್ಪ ಎ ಎಸ್ ಐ. ಶಿವಪ್ಪ HC. ಸೋಮಶೇಖರ್ HC. ಚಂದ್ರಾಮ HC. ರಾಜಕುಮಾರ್ CPC. ಶಿವರಾಯ CPC ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *

You May Also Like

ನಭಾಪುರ ತಾಂಡಾದಲ್ಲಿ ಆಕಸ್ಮಿಕ ಬೆಂಕಿಗೆ 5 ಎಕರೆ ಕಬ್ಬು ಸುಟ್ಟು ಭಸ್ಮ

ಉತ್ತರಪ್ರಭಗದಗ: ತಾಲೂಕಿನ ನಭಾಪೂರ ತಾಂಡಾದ ರೈತ ರುಪಣ್ಣ ಸೋಮಪ್ಪ ಲಮಾಣಿಯವರ ಹೋಲದಲ್ಲೊ ಹೊಲದಲ್ಲಿ ಬೆಳೆದಿದ್ದ ಕಬ್ಬು…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಎಚ್.ಡಿ.ದೇವೇಗೌಡರಿಗೆ ಕೃತಜ್ಞತೆ ಸಲ್ಲಿಸಿದ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಬೇಟಿ ಕೊಟ್ಟು ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಮರ್ಪಿಸಿದರು.

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.