ಆಲಮಟ್ಟಿ : 1 ರಿಂದ 10 ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿರುವ ಕ್ಷೀರ ಭಾಗ್ಯದ ಮಾದರಿಯಲ್ಲೇ ಎಲ್ಲ ಮಕ್ಕಳಿಗೂ ಮೊಟ್ಟೆ ಭಾಗ್ಯ ವಿಸ್ತರಿಸಬೇಕು ಎಂದು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರಕಾರಕ್ಕೆ ಆಗ್ರಹಿಸಿದೆ.


ಈ ಕುರಿತು ಆಲಮಟ್ಟಿಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಾಗು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ, ಈಗಾಗಲೇ ಸರಕಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ವಾರದ ಮೂರು ದಿನಗಳು ಮಾತ್ರ ಮೊಟ್ಟೆ ನೀಡುತ್ತಿದೆ. ಇದು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಬಹು ಉಪಯುಕ್ತ ಯೋಜನೆಯಾಗಿದೆ ಎಂದಿದ್ದಾರೆ.

ಇಂಥ ಮಹತ್ವಾಕಾಂಕ್ಷೆ ಉಪಯುಕ್ತ ಪೌಷ್ಟಿಕಾಹಾರ ಯೋಜನೆ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸುವದು ಅಷ್ಟೊಂದು ಸಮಂಜಸವಲ್ಲ. ಇದನ್ನು ಕ್ಷೀರ ಭಾಗ್ಯದ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಯ 1 ರಿಂದ 10 ನೇ ತರಗತಿಯ ಮಕ್ಕಳಿಗೆ ವಾರದ 5 ದಿನಗಳು ನೀಡಬೇಕು. ಆ ದಿಸೆಯಲ್ಲಿ ಮೊಟ್ಟೆ ಯೋಜನೆ ವಿಸ್ತರಿಸಬೇಕು. ಎಲ್ಲ ಮಕ್ಕಳನ್ನು ಸಮಾನವಾಗಿ ಕಾಣುವವಂತಾಗಬೇಕು. ರಾಜ್ಯದ ಹತ್ತನೇ ತರಗತಿಯೊಳಗಿನ ಎಲ್ಲ ಮಕ್ಕಳಿಗೆ ಮೊಟ್ಟೆ ಯೋಜನೆ ದೊರಕಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಬರುವ ಬಜೆಟ್ ಅಧಿವೇಶನದಲ್ಲಿ ಸರ್ವ ಮಕ್ಕಳಿಗೆ ಮೊಟ್ಟೆ ಭಾಗ್ಯ ಲಭಿಸುವಂತೆ ಘೋಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಸರಕಾರಕ್ಕೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು 7,012 ಪಾಸಿಟಿವ್!: ರಾಜ್ಯದ ಎಲ್ಲ ಜಿಲ್ಲೆಗಳ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಚ್ಚನಿಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…