ಆಲಮಟ್ಟಿ : 1 ರಿಂದ 10 ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿರುವ ಕ್ಷೀರ ಭಾಗ್ಯದ ಮಾದರಿಯಲ್ಲೇ ಎಲ್ಲ ಮಕ್ಕಳಿಗೂ ಮೊಟ್ಟೆ ಭಾಗ್ಯ ವಿಸ್ತರಿಸಬೇಕು ಎಂದು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರಕಾರಕ್ಕೆ ಆಗ್ರಹಿಸಿದೆ.


ಈ ಕುರಿತು ಆಲಮಟ್ಟಿಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಹಾಗು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ, ಈಗಾಗಲೇ ಸರಕಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ವಾರದ ಮೂರು ದಿನಗಳು ಮಾತ್ರ ಮೊಟ್ಟೆ ನೀಡುತ್ತಿದೆ. ಇದು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಬಹು ಉಪಯುಕ್ತ ಯೋಜನೆಯಾಗಿದೆ ಎಂದಿದ್ದಾರೆ.

ಇಂಥ ಮಹತ್ವಾಕಾಂಕ್ಷೆ ಉಪಯುಕ್ತ ಪೌಷ್ಟಿಕಾಹಾರ ಯೋಜನೆ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸುವದು ಅಷ್ಟೊಂದು ಸಮಂಜಸವಲ್ಲ. ಇದನ್ನು ಕ್ಷೀರ ಭಾಗ್ಯದ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಯ 1 ರಿಂದ 10 ನೇ ತರಗತಿಯ ಮಕ್ಕಳಿಗೆ ವಾರದ 5 ದಿನಗಳು ನೀಡಬೇಕು. ಆ ದಿಸೆಯಲ್ಲಿ ಮೊಟ್ಟೆ ಯೋಜನೆ ವಿಸ್ತರಿಸಬೇಕು. ಎಲ್ಲ ಮಕ್ಕಳನ್ನು ಸಮಾನವಾಗಿ ಕಾಣುವವಂತಾಗಬೇಕು. ರಾಜ್ಯದ ಹತ್ತನೇ ತರಗತಿಯೊಳಗಿನ ಎಲ್ಲ ಮಕ್ಕಳಿಗೆ ಮೊಟ್ಟೆ ಯೋಜನೆ ದೊರಕಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಬರುವ ಬಜೆಟ್ ಅಧಿವೇಶನದಲ್ಲಿ ಸರ್ವ ಮಕ್ಕಳಿಗೆ ಮೊಟ್ಟೆ ಭಾಗ್ಯ ಲಭಿಸುವಂತೆ ಘೋಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ಸರಕಾರಕ್ಕೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಫ್ಯಾಂಟಮ್ ಚಿತ್ರದ ಚಿತ್ರೀಕರಣದ ಬಗ್ಗೆ ಕಿಚ್ಚ ಹೇಳಿದ್ದೇನು?

ಲಾಕ್ ಡೌನ್ ಹಿನ್ನೆಲೆಯಲ್ಲಿ ಹಲವು ದಿನಗಳ ನಂತರ ಸರ್ಕಾರ ಶೂಟಿಂಗ್ ಗೆ ಅವಕಾಶ ನೀಡಿದೆ. ಇದರಿಂದಾಗಿ ಕಲಾವಿದರಲ್ಲಿ ಹುರುಪು ಮನೆ ಮಾಡಿದೆ. ಈ ಕುರಿತು ನಟ ಕಿಚ್ಚ ಸುದೀಪ್ ಸಹ ಸುಧೀರ್ಘ ಸಮಯದ ಬಳಿಕ ಶೂಟಿಂಗ್ ಮರಳಿದ ಅನುಭವವನ್ನು ಹಂಚಿಕೊಂಡಿದ್ದಾರೆ.

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ