ಉತ್ತರಪ್ರಭ
ಬೆಂಗಳೂರು:
ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ, ಫೆಬ್ರವರಿ 2022 ರ ದಿನಾಂಕ 12, 13 ರ ಭಾನುವಾರ ರಜಾ ದಿನ ಸಹಿತವಾಗಿ, 14, 15 ಮತ್ತು 16 ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಮುಂದುವರೆದು, ಸದರಿ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್ ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚಿಸಿದೆ.

Leave a Reply

Your email address will not be published. Required fields are marked *

You May Also Like

ಸೀಲ್ ಡೌನ್ ಹೆಸರಿನಲ್ಲಿ ನಡೆಯಿತೇ ಕೋಟಿ ಕೋಟಿ ಅವ್ಯವಹಾರ?

ಕೊರೊನಾ ಸೋಂಕಿತರ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈ ಹಿಂದೆ ಇದರ ಪ್ರಮಾಣ ತುಸು ಹೆಚ್ಚಾಗಿತ್ತು. ಆದರೆ, ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.