ಉತ್ತರಪ್ರಭ ಸುದ್ದಿ
ಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ ಹೈದ್ರಾಬಾದ್ ಕರ್ನಾಟಕ ನಾಯಕರುಗಳ ಒತ್ತಡಕ್ಕೆ ಮಣಿದು ನೇಮಕಾತಿಗೆ ತಡೆಯಾಜ್ಞೆ ನೀಡಿರುವುದರಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೋಹನ ದೊಡಕುಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೈ.ಕ ಭಾಗದವರಿಗೆ ಈಗಾಗಲೇ ಮೀಸಲಾತಿ ಇದ್ದರೂ ಹೆಚ್ಚುವರಿಯಾಗಿ ಮೀಸಲಾತಿ ಕೇಳುತ್ತಿದ್ದು, ಇದರಿಂದ ಗದಗ ಸೇರಿದಂತೆ ಉಳಿದ ಪ್ರದೇಶಗಳಿಂದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುವ ಸಂಭವವಿದೆ. ಮೋದಿ ನೇತೃತ್ವದ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದರೆ ಇಲ್ಲಿ ರಾಜ್ಯ ಸರ್ಕಾರ ಆಯ್ಕೆಯಾಗಿರುವ ನೇಮಕಾತಿ ಸಹ ರದ್ದುಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು, ಇದಕ್ಕಾಗಿ ಈ ಭಾಗದ ನಾಯಕರುಗಳು-ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.