ಉತ್ತರಪ್ರಭ ಸುದ್ದಿ
ಗದಗ:
545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ ಹೈದ್ರಾಬಾದ್ ಕರ್ನಾಟಕ ನಾಯಕರುಗಳ ಒತ್ತಡಕ್ಕೆ ಮಣಿದು ನೇಮಕಾತಿಗೆ ತಡೆಯಾಜ್ಞೆ ನೀಡಿರುವುದರಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೋಹನ ದೊಡಕುಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೈ.ಕ ಭಾಗದವರಿಗೆ ಈಗಾಗಲೇ ಮೀಸಲಾತಿ ಇದ್ದರೂ ಹೆಚ್ಚುವರಿಯಾಗಿ ಮೀಸಲಾತಿ ಕೇಳುತ್ತಿದ್ದು, ಇದರಿಂದ ಗದಗ ಸೇರಿದಂತೆ ಉಳಿದ ಪ್ರದೇಶಗಳಿಂದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುವ ಸಂಭವವಿದೆ. ಮೋದಿ ನೇತೃತ್ವದ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದರೆ ಇಲ್ಲಿ ರಾಜ್ಯ ಸರ್ಕಾರ ಆಯ್ಕೆಯಾಗಿರುವ ನೇಮಕಾತಿ ಸಹ ರದ್ದುಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು, ಇದಕ್ಕಾಗಿ ಈ ಭಾಗದ ನಾಯಕರುಗಳು-ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಗಡಿಯಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ

ತಾಲೂಕಿನ ಮಾಗಡಿ ಗ್ರಾಮದ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಮಾಗಡಿಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಕರುಗಳ ಪ್ರದರ್ಶನ ಜರುಗಿತು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ – ತಾಲೂಕಾಡಳಿತದಿಂದ ಅಹವಾಲು ಸ್ವೀಕಾರ
ಗೋಳು ತೋಡಿಕೊಂಡ ಗೊಳಸಂಗಿ ಜನ.!

ಉತ್ತರಪ್ರಭ ಸುದ್ದಿಗೊಳಸಂಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ನಿಮಿತ್ತ ಗೊಳಸಂಗಿ ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದಲ್ಲಿ…

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…