ಉತ್ತರಪ್ರಭ ಸುದ್ದಿ
ಗದಗ:
545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ ಹೈದ್ರಾಬಾದ್ ಕರ್ನಾಟಕ ನಾಯಕರುಗಳ ಒತ್ತಡಕ್ಕೆ ಮಣಿದು ನೇಮಕಾತಿಗೆ ತಡೆಯಾಜ್ಞೆ ನೀಡಿರುವುದರಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೋಹನ ದೊಡಕುಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೈ.ಕ ಭಾಗದವರಿಗೆ ಈಗಾಗಲೇ ಮೀಸಲಾತಿ ಇದ್ದರೂ ಹೆಚ್ಚುವರಿಯಾಗಿ ಮೀಸಲಾತಿ ಕೇಳುತ್ತಿದ್ದು, ಇದರಿಂದ ಗದಗ ಸೇರಿದಂತೆ ಉಳಿದ ಪ್ರದೇಶಗಳಿಂದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುವ ಸಂಭವವಿದೆ. ಮೋದಿ ನೇತೃತ್ವದ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದರೆ ಇಲ್ಲಿ ರಾಜ್ಯ ಸರ್ಕಾರ ಆಯ್ಕೆಯಾಗಿರುವ ನೇಮಕಾತಿ ಸಹ ರದ್ದುಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು, ಇದಕ್ಕಾಗಿ ಈ ಭಾಗದ ನಾಯಕರುಗಳು-ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಊರಿಗೊಂದು ಸ್ಮಶಾನಕ್ಕೆ ಆದ್ಯತೆ: ಸಚಿವ ಆರ್.ಅಶೋಕ್

ಗದಗ: ರಾಜ್ಯ ಸರ್ಕಾರ ಊರಿಗೊಂದು ಸ್ಮಶಾನಕ್ಕೆ ಆದ್ಯತೆ ನೀಡಿದ್ದು, ಈ ಬಗ್ಗೆ ಅನುದಾನದ ವ್ಯವಸ್ಥೆ ಕೂಡ…

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.

ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ

ಜೀವನದಲ್ಲಿ ಒಂದಿಲ್ಲ ಒಂದು ಸಂಕಷ್ಟಗಳು ಇರುತ್ತವೆ. ಸಂಕಷ್ಟ ಎದುರಿಸುವ ಮನೋಬಲ ಬಲಿಷ್ಠವಿದ್ದರೆ ಎಂತಹ ಸಮಸ್ಯೆಯೂ ದೂರ ಮಾಡಬಹುದು ಈ ನಿಟ್ಟಿನಲ್ಲಿ ಸಾಧಕರ ಯಶೋಗಾಥೆಗಳನ್ನು ಅವಲೋಕಿಸಿಕೊಂಡು ಮುನ್ನಡೆಯಿರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರಸಾ ರಾಯಬಾಗಿ ಹೇಳಿದರು.

ಹಿರಿಯರ ಹಗಲು ಯೋಗಕ್ಷೇಮ ಕೇಂದ್ರ ಉದ್ಘಾಟನೆ

ಉತ್ತರಪ್ರಭ ಸುದ್ದಿನರಗುಂದ: ಸ್ನೇಹ ಸಂಜೀವಿನಿ ವಿವಿದೋದ್ದೇಶಗಳ ಹಾಗೂ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಇಂದು ಹಿರಿಯ…