ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಆಲಮಟ್ಟಿ- ನಿಡಗುಂದಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ -13 ರ ಗಂಗಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (SRS TEAVELS) ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟದ್ದಾರೆ. ಈ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೃತರಿಬ್ಬರು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನಿಲ ಮಲ್ಲಪ್ಪ ಮಂಕಣಿ (24) ಹಾಗೂ ಯಲ್ಲನಗೌಡ ಬಸನಗೌಡ ಮಂಕಣಿ (23) ಎಂದು ಗುರುತಿಸಲಾಗಿದೆ.


ಆಲಮಟ್ಟಿ ಯಿಂದ ಮರಳಿ ತಮ್ಮೂರು ಅಬ್ಬಿಹಾಳ ಗ್ರಾಮಕ್ಕೆ ತೆರಳುತ್ತಿದ್ದ ಬೈಕ್, ವಿಜಯಪುರ ದಿಂದ ಬೆಂಗಳೂರಗೆ ಹೊರಟಿದ್ದ ಖಾಸಗಿ ಬಸ್ ಮಧ್ಯೆ ಈ ಅಪಘಾತ ಸಂಭವಿಸಿದೆ.


ಮೃತ ದೇಹಗಳು ಬಸ್ ಗಾಲಿಯಲ್ಲಿ ಸಿಕ್ಕಿಕೊಂಡಿದ್ದು ಅಪಘಾತದ ಭೀಕರತೆ ತೋರಿಸುತ್ತಿತ್ತು.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಅರುಣಕುಮಾರ ಕೋಳೂರ, ಸಿಪಿಐ ಸೋಮಶೇಖರ್ ಜುಟ್ಟಲ, ಪಿಎಸ್ ಐ ಚಂದ್ರಶೇಖರ ‌ಹೆರಕಲ್ಲ ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *

You May Also Like

ನಮ್ಮ ಸಮಬಲ ಇದ್ದರೆ ಮಾತ್ರ ಯುದ್ಧ ಸಾರುತ್ತೇವೆ…ರಾಜರಾಜೇಶ್ವರಿ ನಗರದಲ್ಲಿ ಹಾಗಿಲ್ಲ!!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ –…

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.