ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಆಲಮಟ್ಟಿ- ನಿಡಗುಂದಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ -13 ರ ಗಂಗಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (SRS TEAVELS) ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟದ್ದಾರೆ. ಈ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೃತರಿಬ್ಬರು ನಿಡಗುಂದಿ ತಾಲ್ಲೂಕಿನ ಅಬ್ಬಿಹಾಳ ಗ್ರಾಮದ ಸುನಿಲ ಮಲ್ಲಪ್ಪ ಮಂಕಣಿ (24) ಹಾಗೂ ಯಲ್ಲನಗೌಡ ಬಸನಗೌಡ ಮಂಕಣಿ (23) ಎಂದು ಗುರುತಿಸಲಾಗಿದೆ.


ಆಲಮಟ್ಟಿ ಯಿಂದ ಮರಳಿ ತಮ್ಮೂರು ಅಬ್ಬಿಹಾಳ ಗ್ರಾಮಕ್ಕೆ ತೆರಳುತ್ತಿದ್ದ ಬೈಕ್, ವಿಜಯಪುರ ದಿಂದ ಬೆಂಗಳೂರಗೆ ಹೊರಟಿದ್ದ ಖಾಸಗಿ ಬಸ್ ಮಧ್ಯೆ ಈ ಅಪಘಾತ ಸಂಭವಿಸಿದೆ.


ಮೃತ ದೇಹಗಳು ಬಸ್ ಗಾಲಿಯಲ್ಲಿ ಸಿಕ್ಕಿಕೊಂಡಿದ್ದು ಅಪಘಾತದ ಭೀಕರತೆ ತೋರಿಸುತ್ತಿತ್ತು.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಅರುಣಕುಮಾರ ಕೋಳೂರ, ಸಿಪಿಐ ಸೋಮಶೇಖರ್ ಜುಟ್ಟಲ, ಪಿಎಸ್ ಐ ಚಂದ್ರಶೇಖರ ‌ಹೆರಕಲ್ಲ ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ: ಗ್ರಾಮ ದೇವತೆ ದ್ಯಾಮವ್ವದೇವಿಯ ಜಾತ್ರೆಗೆ ಸಂಭ್ರಮದ ತೆರೆ

ಶಿರಹಟ್ಟಿ: ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ಜಾತ್ರೆಯು ಕಳೆದ 3 ದಿನಗಳಿಂದ ಅತ್ಯಂತ ವೈಭವದಿಂದ ಜರುಗಿದ್ದು, ಗುರುವಾರ ಸಲಕ ವಾದ್ಯ ಮೇಳಗಳೊಂದಿಗೆ ದ್ಯಾಮವ್ವ ದೇವಿಯನ್ನು ಗುಡಿ ದುಂಬಿಸುವದರ ಮೂಲಕ ಜಾತ್ರೆಗೆ ಸಂಭ್ರಮದ ತೆರೆ ಎಳೆಯಲಾಯಿತು.

ಗ್ರಾಮ ಪಂಚಾಯತಿ ಚುನಾವಣೆ: ಅಭಿಪ್ರಾಯ ಸಲ್ಲಿಕೆಗೆ ಚುನಾವಣಾ ಆಯೋಗ ನಿರ್ದೇಶನ

ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಜಾಲಿ ಮೂಡಲ್ಲಿರುವ ದಿಗಂತ್, ಐಂದ್ರಿತಾ!

ಬೆಂಗಳೂರು : ಚಂದನವನದ ಕ್ಯೂಟ್ ಕಪಲ್ ದೂದ್ ಪೇಡಾ ದಿಗಂತ್ ಮತ್ತು ನಟಿ ಐಂದ್ರಿತಾ ರೇ…

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…