ವರದಿ: ವಿಠಲ‌ ಕೆಳೂತ್


ಮಸ್ಕಿ:ಪಟ್ಟಣದ 20ನೇ ವಾರ್ಡಿನ ಶುದ್ದ ಕುಡಿಯುವ ನೀರಿನ ಘಟಕ ಕಳಪೆ ಕಾಮಗಾರಿಯಿಂದ ಕೂಡಿದ್ದು, ತನಿಖೆ ಕೈಗೊಂಡು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ನಾರಾಯಣಗೌಡ ಬಣದ ಕರವೇ ಅಧ್ಯಕ್ಷ ದುರಗರಾಜ ವಟಗಲ್ಲ ಆರೋಪಿಸಿದರು.


ಪಟ್ಟಣದ ಗಾಂಧಿನಗರದಲ್ಲಿ ಬೆಳಿಗ್ಗೆ ಕೆಲ ಕಾಲ‌ ಪ್ರತಿಭಟನೆ ನಡೆಸಿ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಅಕ್ರೋಶ ಹೊರ ಹಾಕಿದರು.
ಬಳಿಕ ಮಾತನಾಡಿದ ಅವರು, 2019-20ನೇ ಸಾಲಿನಲ್ಲಿ 20ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ದ ಕುಡಿಯುವ ನೀರಿನ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿ ಮಗಿದು 3ವರ್ಷಗಳು ಗತಿಸಿವೆ, ಪ್ಲಾಂಟ್ ಆರಂಭಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರು ಕ್ಯಾರೆ ಎನ್ನುತ್ತಿಲ್ಲ. ಘಟಕ ಆರಂಭಿಸದೇ ಇರುವುದರಿಂದ ಬಡವಾಣೆಯ ಜನರಿಗೆ ನೀರಿನ ಬವಣೆ ಉಂಟಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದ ಹಿನ್ನಲೆಯಲ್ಲಿ ಘಟಕ ಆರಂಭವಾಗಿಲ್ಲ. ಆರಂಭಿಸಲು ಕಾಲಹರಣ ಮಾಡುತ್ತಿದ್ದಾರೆ. ಕೂಡಲೇ ಶುದ್ದ ಕುಡಿಯುವ ಘಟಕ ಆರಂಭಿಸಬೇಕೆಂದು ಒತ್ತಾಯಿಸಿದರು. ಲಿಂಗಸ್ಗೂರಿನ ಆರ್ ಡಬ್ಲೂ, ಎಸ್ ಎಸ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ, ಅಸ್ಮಾ ನೂರ ಅಮ್ಮದ್, ಮಾಜಿ ಜಿಪಂ ಮಹಾದೇವಿ, ಬಸವರಾಜ, ರಾಘು, ಶಿವು ಜಾಕಿ, ಲಕ್ಣ್ಮಣ, ಸಚಿನ ಸೇರಿದಂತೆ ಇನ್ನಿತರಿದ್ದರು

Leave a Reply

Your email address will not be published. Required fields are marked *

You May Also Like

ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಅಕ್ರಮ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ದಾಳಿ

ಗದಗ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ…

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ. ಎಲ್ಲೆಲ್ಲೂ ತಿರಂಗಾ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ…

ಭಾರತದಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದ್ದು ಎಷ್ಟು ಜನರಿಗೆ ಗೊತ್ತಾ?

ಭಾರತದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿರೀಕ್ಷೆ ಮೀರಿ ದಾಖಲಾಗುತ್ತಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 4,296 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 111 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.