ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00 ಗಂಟೆಗೆ ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಆಚರಿಸಲಾಯಿತು. ಕರ್ನಾಟಕ ರಾಜ್ಯ ಗದಗ ಜಿಲ್ಲೆ ಹಾಗೂ ವಿವಿಧ ಜಿಲ್ಲೆಗಳಿಂದ ದುಡಿಯಲಿಕೆ ವಲಸೆ ಹೋಗಿರುವ ಯುವಕರೂ ಬಂಜಾರ ಧರ್ಮದ ಕುಲಗುರು, ಆರಾಧ್ಯ ದೇವ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಭೋಗ ಹಚ್ಚುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ಆಚರಿಸಿದರು.

ಈ ಸಂದರ್ಬದಲ್ಲಿ ಸಂತ ಸೇವಾಲಾಲರ ತತ್ವ ಆದರ್ಶಗಳನ್ನು, ವಿಶ್ವಕ್ಕೆ ಅವರು ಸಾರಿದ ಸಂದೆಶಗ ಳನ್ನು ನೆನಪಿಸಿಕೊಂಡು ಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶೇಖರ. ಶಂಕರ. ಆನಂದ್. ಕೃಷ್ಣ. ರಾಮಜಿ,ವಿಕ್ರಮ, ಮುಕೇಶ, ಉಮೇಶ, ರಮೇಶ, ವಸಂತ, ರವಿ,ನಾಗರಾಜ್,ಜಾನ್, ನಂದಿ, ಲಕ್ಕಿ. ಮಲ್ಲೇಶ,ಶಿವ. ವಾಚಪ್ಪ. ಕುಮಾರ, ಪ್ರಕಾಶ, ಸಂತೋಷ್.ರಾಹುಲ್ ರಾಜ. ಗುರು. ಪಾಂಡು. ಧರ್ಮ,ಅಶೋಕ,ಮೋತಿಲಾಲ್ಮಾಂತೇಶ, ಪಾಂಡುರಂಗ, ರವಿರಾಜ್,ಮಹೇಶ ಸೇರಿದಂತೆ ಯುವಕರೂ ಹಾಗು ಮಹಿಳೆಯರು, ಮತ್ತು ಹಿರಿಯರು ಭಾಗಹಿಸಿದ್ದರು. ಪಾಂಡು ಚವ್ಹಾಣ ಉತ್ತರಪ್ರಬ್ ಗದಗ

Leave a Reply

Your email address will not be published. Required fields are marked *

You May Also Like

ನಂದಿನಿ ಮಳಿಗೆಯಲ್ಲಿ ಸಿಹಿ ಉತ್ಸವಕ್ಕೆ ಚಾಲನೆ- ಉತ್ಪನ್ನಗಳ ಮೇಲೆ 20•/• ರಿಯಾಯಿತಿ

ಉತ್ತರಪ್ರಭಆಲಮಟ್ಟಿ: ಕ್ರಿಸ್ಮಸ್, ನ್ಯೂಇಯರ್, ಸಂಕ್ರಾಂತಿ ಹೀಗೆ ಒಂದರ ಹಿಂದೆ ಒಂದೊಂದು ವಿಶೇಷ ಹಬ್ಬಗಳು ಎದುರುಗೊಳ್ಳುತ್ತಿವೆ. ಈ…

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ. ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.