ವರದಿ: ವಿಠಲ ಕೆಳೂತ್
ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು ಭಸ್ಮ ಆಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಬಣಿವೆ ಜಕ್ಕೇರಮಡು ತಾಂಡದ ಶೇಖರಪ್ಪ ಕಾರಭಾರಿ ಅವರ ಕುಟುಂಬಕ್ಕೆ ಸಂಬಂಧಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ 4 ಟ್ರ್ಯಾಕ್ಟರ್ ಜೋಳದ ಸೊಪ್ಪಿ, ಸುಟ್ಟು ಭಸ್ಮವಾಗಿದೆ.ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು, ಕೆಲವೇ ಕ್ಷಣದಲ್ಲಿ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ‌ ನಂದಿಸಿದರು, ಇದರಿಂದ ಅದರ ಪಕ್ಕದಲ್ಲಿನ ಎರಡು ಬಣಿವೆಗಳು ರಕ್ಷಣೆ ಆಯಿತು ಎಂದು ಗ್ರಾಮದ ಮುಖಂಡ ಮಾನಪ್ಪ ಚವ್ಹಾಣ, ರವಿಕುಮಾರ ತಿಳಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

You May Also Like

ನಾಳೆ ರಾಜ್ಯ ಬಂದ್ ಏನಿರುತ್ತೆ..? ಏನಿರಲ್ಲ..?

ಮಾರಾಟ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಕೆಲವು ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇರುತ್ತದೆ. ಇದರೊಂದಿಗೆ ಖಾಸಗಿ ಬಸ್, ಪ್ರಯಾಣಿಕರ ವಾಹನಗಳು, ಸರ್ಕಾರಿ ಕಚೇರಿ, ಮೆಟ್ರೋ ಸೇವೆ, ಆಸ್ಪತ್ರೆ ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ರೈಲು ಸಂಚಾರ, ಹೋಟೆಲ್, ಹಣ್ಣು ತರಕಾರಿ ವ್ಯಾಪಾರ ಮೊದಲಾದವು ಇರುತ್ತವೆ.

ಇಂದಿನಿಂದ ವೈದ್ಯಕೀಯ ಕಾಲೇಜ್ ಆರಂಭ

ರಾಜ್ಯದಲ್ಲಿ ಡಿ. 1 ರಿಂದ ಎಲ್ಲ ವೈದ್ಯಕೀಯ ಕಾಲೇಜುಗಳು ಮತ್ತು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳ ತರಗತಿ ಆರಂಭಕ್ಕೆ ಸರ್ಕಾರ ಅವಕಾಶ ನೀಡಿದ ಹಿನ್ನಲೆಯಲ್ಲಿ ಪಟ್ಟಣದ ಭಗವಾನ್ ಮಹಾವೀರ ಜೈನ್ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಸ್ಯಾನಿಟೈಜರ ಮಾಡಲಾಯಿತು.