ವರದಿ: ವಿಠಲ ಕೆಳೂತ್
ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು ಭಸ್ಮ ಆಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಬಣಿವೆ ಜಕ್ಕೇರಮಡು ತಾಂಡದ ಶೇಖರಪ್ಪ ಕಾರಭಾರಿ ಅವರ ಕುಟುಂಬಕ್ಕೆ ಸಂಬಂಧಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ 4 ಟ್ರ್ಯಾಕ್ಟರ್ ಜೋಳದ ಸೊಪ್ಪಿ, ಸುಟ್ಟು ಭಸ್ಮವಾಗಿದೆ.ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು, ಕೆಲವೇ ಕ್ಷಣದಲ್ಲಿ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು, ಇದರಿಂದ ಅದರ ಪಕ್ಕದಲ್ಲಿನ ಎರಡು ಬಣಿವೆಗಳು ರಕ್ಷಣೆ ಆಯಿತು ಎಂದು ಗ್ರಾಮದ ಮುಖಂಡ ಮಾನಪ್ಪ ಚವ್ಹಾಣ, ರವಿಕುಮಾರ ತಿಳಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.