ವರದಿ: ವಿಠಲ ಕೆಳೂತ್
ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು ಭಸ್ಮ ಆಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಬಣಿವೆ ಜಕ್ಕೇರಮಡು ತಾಂಡದ ಶೇಖರಪ್ಪ ಕಾರಭಾರಿ ಅವರ ಕುಟುಂಬಕ್ಕೆ ಸಂಬಂಧಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ 4 ಟ್ರ್ಯಾಕ್ಟರ್ ಜೋಳದ ಸೊಪ್ಪಿ, ಸುಟ್ಟು ಭಸ್ಮವಾಗಿದೆ.ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು, ಕೆಲವೇ ಕ್ಷಣದಲ್ಲಿ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ‌ ನಂದಿಸಿದರು, ಇದರಿಂದ ಅದರ ಪಕ್ಕದಲ್ಲಿನ ಎರಡು ಬಣಿವೆಗಳು ರಕ್ಷಣೆ ಆಯಿತು ಎಂದು ಗ್ರಾಮದ ಮುಖಂಡ ಮಾನಪ್ಪ ಚವ್ಹಾಣ, ರವಿಕುಮಾರ ತಿಳಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

You May Also Like

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.