ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ ವ್ಯಾಪ್ತಿಯಲ್ಲಿ ಬರುವ ಬಗರ ಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಕೊಡುತ್ತಿರುವ ಕಿರುಕುಳಕ್ಕೆ ಜನರು ಬೆಸತ್ತು ಹೋಗಿದ್ದಾರೆ.
ಯಾವ ಜನ ಕಪ್ಪತ್ತಗುಡ್ಡವನ್ನು ಉಳಿಸಿದ್ದಾರೆ ಅವರಿಗೆ ಅನ್ಯಾಯ ಮಾಡುವ ನಿಟ್ಟಿನಲ್ಲಿ ಹೊರಟ ಅರಣ್ಯ ಇಲಾಖೆಯ ನಡೆಗೆ ಹಿಡಿಶಾಪಹಾಕುತ್ತಿದ್ದಾರೆ.
ಮುಂಡರಗಿ ತಾಲೂಕಿನ ಶಿಂಗಟರಾಯನ ಕೆರೆ ತಾಂಡಾದಲ್ಲಿ ತಲೆತಲಾಂತರದಿಂದ ಜಮೀನನ್ನು ಉಳುಮೆ ಮಾಡುತ್ತಾ ಬಂದಿದ್ದ ಹಾಮೇಶ ರಾಮಪ್ಪ ಚವ್ಹಾಣ ಇವರ ಜಮೀನಿಗೆ ತಂತಿ ಬೇಲಿ ಹಾಕಲು ಬಂದಿದ್ದ ಮುಂಡರಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪರಿಪರಿಯಾಗಿ ಮಹಿಳೆಯರು ಮಕ್ಕಳು ಬೇಡಿಕೊಂಡರು ಅವರ ಮೇಲೆ ದೌರ್ಜನ್ಯ ಮಾಡಿ ಬೇಲಿ ಹಾಕಲು ಯತ್ನಿಸಿದ ಪರಿಣಾಮ ಅದರಿಂದ ಮನನೊಂದು ಸೊನವ್ವ ರಾಮಜಿ ಕಾರಭಾರಿ ಇಂದು ನಿಧನ ಹೊಂದಿದ್ದಾರೆ ಎಂದು ಸ್ಥಳೀಯರಿಂದ ತಿಳಿದುಬಂದಿದೆ.
ಅರಣ್ಯ ಇಲಾಖೆಯು ಯಾರು ಬಡವರಿದ್ದಾರೆ, ನಿರ್ಗತಿಕರಿದ್ದಾರೆ ತಮ್ಮ ತುತ್ತಿನ ಚೀಲವನ್ನು ತುಂಬೋಗೋಸ್ಕರ ಅರಣ್ಯಭೂಮಿ ಮೇಲೆ ಅವಲಂಭಿತರಾಗಿದ್ದಾರೆ ಅವರನ್ನೆ ಶೋಷಣೆ ಮಾಡುತ್ತಾ ಬಂದಿದೆ ಎನ್ನುವುದಕ್ಕೆ ಇದೋಂದು ತಾಜಾ ಉದಾಹರಣೆ ಎನ್ನಬಹುದು.
ಅರಣ್ಯ ಇಲಾಖೆಯ ಈ ಕ್ರಮಕ್ಕೆ ಜನರು ಬೆಸತ್ತು ಹೋಗಿದ್ದಾರೆ ಮ್ರತ ಮಹಿಳೆಯ ಶವವನ್ನು ಇಟ್ಟು ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರೆಯುತ್ತದೆಂದು ತಿಳಿದು ಬಂದಿದೆ. ಈಗಲಾದರು ಅರಣ್ಯ ಇಲಾಖೆಯು ಬಗರಹುಕೂಮ ಸಾಗುವಳಿದಾರರಿಗೆ ನೆಮ್ಮದಿಯಿಂದ ಜೀವನ ನಡೆಸಲು ಅನೂವು ಮಾಡಿಕೊಡಬೇಕಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ