ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ ವ್ಯಾಪ್ತಿಯಲ್ಲಿ ಬರುವ ಬಗರ ಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಕೊಡುತ್ತಿರುವ ಕಿರುಕುಳಕ್ಕೆ ಜನರು ಬೆಸತ್ತು ಹೋಗಿದ್ದಾರೆ.
ಯಾವ ಜನ ಕಪ್ಪತ್ತಗುಡ್ಡವನ್ನು ಉಳಿಸಿದ್ದಾರೆ ಅವರಿಗೆ ಅನ್ಯಾಯ ಮಾಡುವ ನಿಟ್ಟಿನಲ್ಲಿ ಹೊರಟ ಅರಣ್ಯ ಇಲಾಖೆಯ ನಡೆಗೆ ಹಿಡಿಶಾಪಹಾಕುತ್ತಿದ್ದಾರೆ.
ಮುಂಡರಗಿ ತಾಲೂಕಿನ ಶಿಂಗಟರಾಯನ ಕೆರೆ ತಾಂಡಾದಲ್ಲಿ ತಲೆತಲಾಂತರದಿಂದ ಜಮೀನನ್ನು ಉಳುಮೆ ಮಾಡುತ್ತಾ ಬಂದಿದ್ದ ಹಾಮೇಶ ರಾಮಪ್ಪ ಚವ್ಹಾಣ ಇವರ ಜಮೀನಿಗೆ ತಂತಿ ಬೇಲಿ ಹಾಕಲು ಬಂದಿದ್ದ ಮುಂಡರಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪರಿಪರಿಯಾಗಿ ಮಹಿಳೆಯರು ಮಕ್ಕಳು ಬೇಡಿಕೊಂಡರು ಅವರ ಮೇಲೆ ದೌರ್ಜನ್ಯ ಮಾಡಿ ಬೇಲಿ ಹಾಕಲು ಯತ್ನಿಸಿದ ಪರಿಣಾಮ ಅದರಿಂದ ಮನನೊಂದು ಸೊನವ್ವ ರಾಮಜಿ ಕಾರಭಾರಿ ಇಂದು ನಿಧನ ಹೊಂದಿದ್ದಾರೆ ಎಂದು ಸ್ಥಳೀಯರಿಂದ ತಿಳಿದುಬಂದಿದೆ.
ಅರಣ್ಯ ಇಲಾಖೆಯು ಯಾರು ಬಡವರಿದ್ದಾರೆ, ನಿರ್ಗತಿಕರಿದ್ದಾರೆ ತಮ್ಮ ತುತ್ತಿನ ಚೀಲವನ್ನು ತುಂಬೋಗೋಸ್ಕರ ಅರಣ್ಯಭೂಮಿ ಮೇಲೆ ಅವಲಂಭಿತರಾಗಿದ್ದಾರೆ ಅವರನ್ನೆ ಶೋಷಣೆ ಮಾಡುತ್ತಾ ಬಂದಿದೆ ಎನ್ನುವುದಕ್ಕೆ ಇದೋಂದು ತಾಜಾ ಉದಾಹರಣೆ ಎನ್ನಬಹುದು.
ಅರಣ್ಯ ಇಲಾಖೆಯ ಈ ಕ್ರಮಕ್ಕೆ ಜನರು ಬೆಸತ್ತು ಹೋಗಿದ್ದಾರೆ ಮ್ರತ ಮಹಿಳೆಯ ಶವವನ್ನು ಇಟ್ಟು ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರೆಯುತ್ತದೆಂದು ತಿಳಿದು ಬಂದಿದೆ. ಈಗಲಾದರು ಅರಣ್ಯ ಇಲಾಖೆಯು ಬಗರಹುಕೂಮ ಸಾಗುವಳಿದಾರರಿಗೆ ನೆಮ್ಮದಿಯಿಂದ ಜೀವನ ನಡೆಸಲು ಅನೂವು ಮಾಡಿಕೊಡಬೇಕಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…

ಮಕ್ಕಳಲ್ಲಿ ಸೋಂಕಿನ ಪ್ರಮಾಣ ಆಧರಿಸಿ ಶಾಲೆಗಳಿಗೆ ರಜೆ ಘೋಷಿಸಲು ತೀರ್ಮಾನ

ಗದಗ:ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಸೋಂಕು ತಗಲುವಿಕೆಯ ಪ್ರಮಾಣ…