ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ ವ್ಯಾಪ್ತಿಯಲ್ಲಿ ಬರುವ ಬಗರ ಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಕೊಡುತ್ತಿರುವ ಕಿರುಕುಳಕ್ಕೆ ಜನರು ಬೆಸತ್ತು ಹೋಗಿದ್ದಾರೆ.
ಯಾವ ಜನ ಕಪ್ಪತ್ತಗುಡ್ಡವನ್ನು ಉಳಿಸಿದ್ದಾರೆ ಅವರಿಗೆ ಅನ್ಯಾಯ ಮಾಡುವ ನಿಟ್ಟಿನಲ್ಲಿ ಹೊರಟ ಅರಣ್ಯ ಇಲಾಖೆಯ ನಡೆಗೆ ಹಿಡಿಶಾಪಹಾಕುತ್ತಿದ್ದಾರೆ.
ಮುಂಡರಗಿ ತಾಲೂಕಿನ ಶಿಂಗಟರಾಯನ ಕೆರೆ ತಾಂಡಾದಲ್ಲಿ ತಲೆತಲಾಂತರದಿಂದ ಜಮೀನನ್ನು ಉಳುಮೆ ಮಾಡುತ್ತಾ ಬಂದಿದ್ದ ಹಾಮೇಶ ರಾಮಪ್ಪ ಚವ್ಹಾಣ ಇವರ ಜಮೀನಿಗೆ ತಂತಿ ಬೇಲಿ ಹಾಕಲು ಬಂದಿದ್ದ ಮುಂಡರಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪರಿಪರಿಯಾಗಿ ಮಹಿಳೆಯರು ಮಕ್ಕಳು ಬೇಡಿಕೊಂಡರು ಅವರ ಮೇಲೆ ದೌರ್ಜನ್ಯ ಮಾಡಿ ಬೇಲಿ ಹಾಕಲು ಯತ್ನಿಸಿದ ಪರಿಣಾಮ ಅದರಿಂದ ಮನನೊಂದು ಸೊನವ್ವ ರಾಮಜಿ ಕಾರಭಾರಿ ಇಂದು ನಿಧನ ಹೊಂದಿದ್ದಾರೆ ಎಂದು ಸ್ಥಳೀಯರಿಂದ ತಿಳಿದುಬಂದಿದೆ.
ಅರಣ್ಯ ಇಲಾಖೆಯು ಯಾರು ಬಡವರಿದ್ದಾರೆ, ನಿರ್ಗತಿಕರಿದ್ದಾರೆ ತಮ್ಮ ತುತ್ತಿನ ಚೀಲವನ್ನು ತುಂಬೋಗೋಸ್ಕರ ಅರಣ್ಯಭೂಮಿ ಮೇಲೆ ಅವಲಂಭಿತರಾಗಿದ್ದಾರೆ ಅವರನ್ನೆ ಶೋಷಣೆ ಮಾಡುತ್ತಾ ಬಂದಿದೆ ಎನ್ನುವುದಕ್ಕೆ ಇದೋಂದು ತಾಜಾ ಉದಾಹರಣೆ ಎನ್ನಬಹುದು.
ಅರಣ್ಯ ಇಲಾಖೆಯ ಈ ಕ್ರಮಕ್ಕೆ ಜನರು ಬೆಸತ್ತು ಹೋಗಿದ್ದಾರೆ ಮ್ರತ ಮಹಿಳೆಯ ಶವವನ್ನು ಇಟ್ಟು ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರೆಯುತ್ತದೆಂದು ತಿಳಿದು ಬಂದಿದೆ. ಈಗಲಾದರು ಅರಣ್ಯ ಇಲಾಖೆಯು ಬಗರಹುಕೂಮ ಸಾಗುವಳಿದಾರರಿಗೆ ನೆಮ್ಮದಿಯಿಂದ ಜೀವನ ನಡೆಸಲು ಅನೂವು ಮಾಡಿಕೊಡಬೇಕಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಸ್ಟಡಿಗೆ ನೀಡಿದ ಕೋರ್ಟ್!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ

ವರದಿ: ವಿಠಲ ಕೆಳೂತ್ಮಸ್ಕಿ: ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ…

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳಿಗೆ ಕೆಟಿಟಿಎಫ್ ನೋಂದಣಿ ಕಡ್ಡಾಯ

ಉತ್ತರಪ್ರಭ ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ.ಪಾಟೀಲ್ ಕಿಡಿ

ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಗಲಾಟೆ, ಹೊಡೆದಾಟ, ಗೊಂದಲಗಳೇ ತುಂಬಿವೆ. ಬಿಜೆಪಿ ಸರ್ಕಾರಕ್ಕೆ ಅಥವಾ ಪಕ್ಷದವರಿಗೆ ಜನರ ಹಿತದ ಕಡೆ ಗಮನವೇ ಇಲ್ಲ ಎಂಬುವುದಕ್ಕೆ ಅವರ ರಾಜಕೀಯ ಕಿತ್ತಾಟಗಳೇ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.