ವರದಿ: ವಿಠಲ ಕೆಳೂತ್
ಮಸ್ಕಿ:
ಪ್ಯಾಕೇಜ್ ಟೆಂಂಡರ್ ರದ್ದುಗೊಳಿಸಿ ಭ್ರಷ್ಟವಾರ ತಡೆಯುವಂತೆ ಒತ್ತಾಯಿಸಿ ಇಲ್ಲಿನ ಗುತ್ತಿಗೆದಾರ ಸಂಘದ ಮುಖಂಡರು ಪತ್ರ ಚಳುವಳಿ ನಡೆಸಿದರು.

ಪ್ಯಾಕೇಜ್ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯ


ಪಟ್ಟಣದ ಅಂಚೆ‌ ಕಚೇರಿ ಮುಂಭಾಗದಲ್ಲಿ ಜಮಾವಣೆಹೊಂಡು ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಪತ್ರ ಬರೆದು ಅಂಚೆ ಪೆಟ್ಟಿಗೆಯಲ್ಲಿ ಹಾಕಿದರು.
ಬಳಿಕ ಗುತ್ತಿಗೆದಾರ ಸಂಘದ ತಾಲೂಕ ಅಧ್ಯಕ್ಷ ಬಲವಂತರಾಯಗೌಡ ಅವರು ಮಾತನಾಡಿ, ಪ್ಯಾಕೇಜ್ ಟೆಂಡರ್ ಹೆಚ್ಚಾಗಿ ಉಳ್ಳವರ ಪಾಲಾಗುತ್ತಿದೆ. ಸಣ್ಣ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಪ್ಯಾಕೇಜ್ ಟೆಂಡರ್ ರದ್ದುಗೊಳಿಸಿ ಭ್ರಷ್ಟಾಚಾರ ತಡೆಯಬೇಕೆಂದು ಪತ್ರ ಚಳುವಳಿ ಮೂಲಕ ಮನವಿ ಮಡಿದರು.
ಈ ಸಂದರ್ಭದಲ್ಲಿ ಶಿವಕುಮಾರ ಬುದ್ದಿನಿ, ಚಾಂದಪಾಶ ಶೇಡ್ಮೀ, ಬಸವರಾಜ ಉದ್ಬಾಳ,ಸಿದ್ದನಗೌಡ ನಾಗರಬೆಂಚಿ, ವೆಂಕನಗೌಡ, ಚಂದ್ರಶೇಖರ ನಾಯಕ, ಹುಲಗಪ್ಪ,ರಮೇಶ ನಾಯಕ, ಮೌನೇಶ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಕಾಮಗಾರಿ ಮುಗಿದರೂ ಹಸ್ತಾಂತರವಾಗದ ಅಂಗನವಾಡಿ

ಬಡ ಮಕ್ಕಳ ಬದುಕಿನಲ್ಲಿ ಶಿಕ್ಷಣ ದಿವಿಗೆಯನ್ನು ಹಚ್ಚಬೇಕಾದ ಅಂಗನವಾಡಿ ಕೇಂದ್ರ ಇದ್ದು ಇಲ್ಲದಂತಾಗಿ ತಾಲೂಕಿನ ಆದರಹಳ್ಳಿ ಗ್ರಾಮದ 2ನೇ ವಾರ್ಡಿನ ಅಂಗನವಾಡಿ ಕೇಂದ್ರ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದೆ. ಹಲವು ವರ್ಷಗಳಿಂದ ಮಕ್ಕಳಿಗೆ ಶಿಕ್ಷಣ ಕೊಡುತ್ತಾ ಬಂದಿದ್ದಾರೆ. ಹೊಸ ಅಂಗನವಾಡಿ ಕೇಂದ್ರ ನಿರ್ಮಾಣವಾಗಿ ಸುಮಾರು ವರ್ಷಗಳು ಕಳೆದರೂ ಇದುವರೆಗೆ ಅಂಗನವಾಡಿ ಕೇಂದ್ರವನ್ನು ಗುತ್ತಿಗೆದಾರರು ಹಸ್ತಾಂತರ ಮಾಡಿಲ್ಲ ಹಾಗೂ ಗ್ರಾ.ಪಂ.ಚುನಾವಣೆ ನಡೆದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೂ ಆಗಿದೆ. ಆದರೆ ಅಂಗನವಾಡಿ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ ಎಂದು 2 ವಾರ್ಡಿನ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೋರ ಹಾಕುತ್ತಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಇಂದು 8 ಸಾವಿರದ ಗಡಿಯಲ್ಲಿ ಮಹಾಮಾರಿ!

ರಾಜ್ಯದಲ್ಲಿ ಇಂದು ಮತ್ತೆ 8,811 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 5,417 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.