ಉತ್ತರಪ್ರಭ ಸುದ್ದಿ
ಗದಗ:
ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು ಮತ್ತು ಉಪಾಧ್ಯಕ್ಷರಾಗಿ ಸುನಂದಾ ಬಾಕಳೆಯವರು ಆಯ್ಕೆಯಾಗುವ ಮೂಲಕ ನಗರಸಭೆಯಲ್ಲಿ ಮಹಿಳಾ ಅಧಿಪತ್ಯಕ್ಕೆ ಅಣಿಯಾಗಿರುವ ಬೆನ್ನಲ್ಲೇ, ಇತ್ತ ಕಾಂಗ್ರೇಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯು ಪಾರದರ್ಶಕತೆಯಿಂದ ಆಗಿಲ್ಲ ಎಂದು ಆರೋಪ ಮಾಡಿ , 19 ಮತಗಳನ್ನು ಕಾಂಗ್ರೇಸ್ ಅಭ್ಯರ್ಥಿ ತೆಗೆದುಕೊಂಡಿದ್ದಾರೆ ಆದರೂ ಬಿಜೆಪಿಯ ಅಭ್ಯರ್ಥಿಯಾದ ಉಷಾ ಮಹೇಶ ದಾಸರವರನ್ನು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆಂದು ಆರೋಪಿಸಿದ್ದರು.
ತದನಂತರ ಕಾಂಗ್ರೇಸ್‌ನಿAದ ಮಾನ್ಯ ಕರ್ನಾಟಕ ಉಚ್ಚನಾಯಾಯಾಲಯದಲ್ಲಿ ತನಗಾದ ಅನ್ಯಾಯದ ಬಗ್ಗೆ ಕೋರ್ಟ ಮೊರೆಹೊಗಿದ್ದರು, ಕಾಂಗ್ರೇಸ್ ಪಕ್ಷದ ಮನವಿಯನ್ನು ಪುರಷ್ಕರಿಸಿದ ಮಾನ್ಯ ನ್ಯಾಯಾಲಯ ದಿನಾಂಕ:21.02.2022 ರಂದು ವಿಚಾರಣೆ ಕಾಯ್ದಿರಿಸಿತ್ತು. ಇಂದು ವಾಧ ಆಲಿಸಿದ ನ್ಯಾಯಾಲಯ, ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಮುಂದುವರೆಯಲಿದ್ದಾರೆ ಏಕೆಂದರೆ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ವಿರೋಧವಿದ್ದಿಲ್ಲ ಹಾಗಾಗಿ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಮುಂದುವರಿಯಲಿದ್ದಾರೆ.
ಆದರೆ ಅಧ್ಯಕ್ಷ ಸ್ಥಾನದ ಬಗ್ಗೆ ಆಕ್ಷೇಪಣೆ ಇರುವುದರಿಂದ ಮಾರ್ಚ 2ಕ್ಕೆ ತೀರ್ಪನ್ನು ಕಾಯ್ದಿರಿಸಿ ಹೈ ಕೋರ್ಟ ಆದೇಶ ಮಾಡಿದೆ. ಬಿಜೆಪಿಯ 19 ಸದಸ್ಯರು ಬಿಜೆಪಿಯ ಉಷಾ ಮಹೇಶ ದಾಸರ ಪರವಾಗಿ ಮತ ಚಲಾಯಿಸಿದ್ದೇವೆೆಂದು ಮುಚ್ಚಳಿಪತ್ರ ಬರೆದುಕೊಟ್ಟಿದ್ದಾರೆಂದು ತಿಳಿದು ಬಂದಿದೆ. ಮಾರ್ಚ 2ರ ತನಕ ಕಾಯಲೇಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಅನುದಾನ ರಹಿತ ಶಿಕ್ಷಕರು ಶಾಪಗ್ರಸ್ಥರೇ? ನಿಕೃಷ್ಟರೇ? ದೌರ್ಭಾಗ್ಯವಂತರೇ?

ಕೊರೋನಾ ವೈರಸ್ ಎಲ್ಲರಿಗೂ ಸರಿಸಮಾನವಾಗಿ ಬಿಡದೆ ಬೆನ್ನತ್ತಿದೆ. ಸರ್ಕಾರೇತರ ಶಿಕ್ಷಕರಿಗೆ ಅದರಲ್ಲೂ ಅಸಂಖ್ಯಾತ ಅನುದಾನರಹಿತ ಶಿಕ್ಷಕರಿಗೆ…

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.

ಕೊರೊನಾ ವಾರಿಯರ್ಸ್ ನಿಜವಾದ ಹಿರೋಗಳು: ಜನಜಾಗೃತಿಯ ಸಂದೇಶ ನೀಡುವ ಚಿತ್ರರಂಗದ ದಿಗ್ಗಜರ ದೃಶ್ಯರೂಪಕ

ಕೊರೊನಾ ಜಾಗೃತಿಗಾಗಿ ಕನ್ನಡ ಚಿತ್ರರಂಗದ ದಿಗ್ಗಜರು ಸಂದೇಶ ನೀಡಿದ ದೃಶ್ಯ ರೂಪಕವನ್ನು ನೀವು ನೋಡಬಹುದು.

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.