ಉತ್ತರಪ್ರಭ ಸುದ್ದಿ
ಗದಗ:
ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಂಗೀತ ಪಾಠಶಾಲೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾರ್ಚ್ 3ರಂದು ಶ್ರೀ ಸಾಯಿ ಜ್ಞಾನ ಯೋಗಾಶ್ರಮ ವಿಶ್ವೇಶ್ವರಯ್ಯ ನಗರ, ಕಳಸಾಪುರ ಗದಗದಲ್ಲಿ ಆಯೋಜನೆಗೊಂಡಿದ್ದು, ಡಾ. ವ್ಹಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನದಿಂದ ಪ್ರತಿ ಪ್ರತಿವರ್ಷದಂತೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ

ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರು ಹಾಗೂ ದಲಿತ ಸಾಹಿತ್ಯ ಅಕಾಡೆಮಿ ನವದೆಹಲಿ ಶಾಖೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ. ಶಾಂತಕುಮಾರ ಬಸಪ್ಪ ಭಜಂತ್ರಿ ಅವರಿಗೆ “ರಾಜ್ಯಮಟ್ಟದ ಸಾಹಿತ್ಯ ರತ್ನ” ಪ್ರಶಸ್ತಿ ನೀಡಲು ಪ್ರತಿಷ್ಠಾನದ ಸಮಿತಿ ತೀರ್ಮಾನಿಸಿದೆ. ಮಾರ್ಚ್ 3ರಂದು ಜರುಗುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ. ಶ್ರೀಮತಿ ವ್ಹಿ.ವಿ. ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಗಾಯನ ನಿಲ್ಲಿಸಿದ ಎಸ್ ಪಿಗೆ ಗಣ್ಯರಿಂದ ಸಂತಾಪ!

ಬೆಂಗಳೂರು : ಉಸಿರು ಚೆಲ್ಲಿದ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಸಿಎಂ ಬಿ.ಎಸ್.…

ಶಾರ್ಪ್ ಶೂಟರ್ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು!

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ…

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…