ಡಾ. ಶಾಂತಕುಮಾರ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ


ಉತ್ತರಪ್ರಭ ಸುದ್ದಿ
ಗದಗ:
ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಂಗೀತ ಪಾಠಶಾಲೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾರ್ಚ್ 3ರಂದು ಶ್ರೀ ಸಾಯಿ ಜ್ಞಾನ ಯೋಗಾಶ್ರಮ ವಿಶ್ವೇಶ್ವರಯ್ಯ ನಗರ, ಕಳಸಾಪುರ ಗದಗದಲ್ಲಿ ಆಯೋಜನೆಗೊಂಡಿದ್ದು, ಡಾ. ವ್ಹಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನದಿಂದ ಪ್ರತಿ ಪ್ರತಿವರ್ಷದಂತೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ

ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರು ಹಾಗೂ ದಲಿತ ಸಾಹಿತ್ಯ ಅಕಾಡೆಮಿ ನವದೆಹಲಿ ಶಾಖೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ. ಶಾಂತಕುಮಾರ ಬಸಪ್ಪ ಭಜಂತ್ರಿ ಅವರಿಗೆ “ರಾಜ್ಯಮಟ್ಟದ ಸಾಹಿತ್ಯ ರತ್ನ” ಪ್ರಶಸ್ತಿ ನೀಡಲು ಪ್ರತಿಷ್ಠಾನದ ಸಮಿತಿ ತೀರ್ಮಾನಿಸಿದೆ. ಮಾರ್ಚ್ 3ರಂದು ಜರುಗುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ. ಶ್ರೀಮತಿ ವ್ಹಿ.ವಿ. ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version