ನಿಡಗುಂದಿ: ಕೋವಿಡ್ ಲಾಕ್ ಡೌನ್ ನಂತರ ಭೌತಿಕ ತರಗತಿಯ ಬಳಿಕ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಇನ್ನೂ ತಿಂಗಳ ಅಂತರದಲ್ಲಿ ನಡೆಯುತ್ತಿದ್ದು, ಫಲಿತಾಂಶ ಹೆಚ್ಚಳಕ್ಕಾಗಿ ಶಿಕ್ಷಕರು ಶ್ರಮಿಸಬೇಕು ಎಂದು ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಾರ್ಯಾಲಯದ ಸಹ ನಿರ್ದೇಶಕ, ಶೈಕ್ಷಣಿಕ ನೋಡಲ್ ಅಧಿಕಾರಿ ಗಜಾನನ ಮನ್ನಿಕೇರಿ ಹೇಳಿದರು.


ನಿಡಗುಂದಿ ಪಟ್ಟಣದ ಹೊರವಲಯದ ಮಣಗೂರ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ನಂತರ ಅವರು ಶಿಕ್ಷಕರಿಗೆ ಸಲಹೆ ನೀಡಿದರು.
ಕಡಿಮೆ ಅವಧಿಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಮನದಟ್ಟು ಮಾಡಿಸಬೇಕು, ಲಾಕ್ ಡೌನ್ ಅವಧಿಯಲ್ಲಿ ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ವಸ್ತುವಾಗಿದ್ದ ಮೊಬೈಲ್ ನಿಂದ ವಿದ್ಯಾರ್ಥಿಗಳು ದೂರ ಇರುವಂತೆ, ಅವರನ್ನು ಸದಾ ಅಧ್ಯಯನ ದಲ್ಲಿ ತೊಡಗುವಂತೆ ನೋಡಿಕೊಳ್ಳಬೇಕು ಎಂದರು. ಪಾಸಿಂಗ್ ಪ್ಯಾಕೇಜ್, ವಿಜ್ಞಾನದ ಪ್ರಯೋಗಗಳು , ನಕಾಶೆ ರಚನೆ, ವ್ಯಾಕಾರಣ, ಗಣಿತದಲ್ಲಿ ಪ್ರಮೇಯಗಳನ್ನು, ಮತ್ತೊಮ್ಮೆ ಮನನ ಮಾಡಿಸಬೇಕು. ಶಿಕ್ಷಕರು ಎಂದಿಗೂ ಕಲಿಯುವ ವಿದ್ಯಾರ್ಥಿ ಎಂದು ಅರಿತು ಪ್ರಯತ್ನಿಸಬೇಕು ಎಂದರು.
ವಿದ್ಯಾರ್ಥಿಗಳೊಂದಿಗೆ ಸಂವಾದ :
ಪ್ರತಿ ಪಠ್ಯದ ಪಠ್ಯಕ್ರಮ ಪೂರ್ಣಗೊಂಡ ಬಗ್ಗೆ ಮಾಹಿತಿ ಪಡೆದು,
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಗಜಾನನ ಮನ್ನಿಕೇರಿ, ಈ ಒಂದು ತಿಂಗಳ ಅವಧಿಯನ್ನು ತಪಸ್ಸಿನಂತೆ ನಿರ್ವಹಿಸಬೇಕು ಎಂದರು. ಮೊಬೈಲ್, ದೂರದರ್ಶನದಿಂದ ದೂರವಿದ್ದು, ಕಲಿಕೆಯ ಅಂಶಗಳ ಮನದಟ್ಟು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಜೀವನದಲ್ಲಿ ಈ ಘಟ್ಟ ಬಹುಮುಖ್ಯವಾಗಿದೆ, ಇದರ ಫಲಿತಾಂಶದ ಮೇಲೆಯೇ ನಿಮ್ಮ ಬಹುತೇಕ ಜೀವನ ನಿರ್ಧಾರವಾಗುತ್ತದೆ, ಬಾಳು ಬಂಗಾರ ಮಾಡಿಕೊಳ್ಳುವ ಸುಸಮಯ ಇದು ಎಂದರು.
ವಿಷಯವಾರು ಕಲಿಕೆಯಲ್ಲಿ ಹಿಂದುಳಿದವರ ಗುಂಪು ಮಾಡಿ ಅವರಿಗೆ ವಿಶೇಷ ಕಲಿಕೆಗೆ ಹೆಚ್ಚುವರಿ ಅವಧಿ ತೆಗೆದುಕೊಳ್ಳಲು ಶಿಕ್ಷಕರಿಗೆ ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ,
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ‌‌.ಟಿ. ಗೌಡರ, ಇಸಿಓ ವಿ.ಪಿ. ಜುಳಜುಳಿ, ಎಂ.ಎಂ. ದೊಡಮನಿ, ಪದ್ಮಾವತಿ ದಾಸರ, ಬಿ.ಎಚ್. ನಾಯಕ, ನಿಂಗಪ್ಪ, ವಿನಾಯಕ ಹೊಂಗಲ್ ಇದ್ದರು.

Leave a Reply

Your email address will not be published. Required fields are marked *

You May Also Like

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು…

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತ ಸಂಘ, ಹಸಿರು ಸೇನೆ: ಮಹಿಳಾ ಘಟಕ ಉದ್ಘಾಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕನಾ೯ಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಮಹಿಳಾ ಘಟಕವೊಂದು ನೂತನವಾಗಿ…

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.