ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ ಅಧಿಕಾರಿಗಳೆ ಬೆಂಕಿ ಹಚ್ಚಿ ಅವರಿವರ ಮೇಲೆ ದೂಶಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ದಿನಾಂಕ: 26.02.2022 ರಂದು ಡಂಬಳ ವ್ಯಾಪ್ತಿಯಲ್ಲಿ ಬೆಂಕಿ ಹತ್ತಿ ಸಾಕಷ್ಟು ಅರಣ್ಯ ನಾಶವಾಗಿದೆ. ಅದು ಅಚಾನಕ ಆಗಿದೆ ಎಂದು ಮುಂಡರಗಿಯ ವಲಯ ಅರಣ್ಯ ಅಧಿಕಾರಿಗಳು ಸ್ಪಷ್ಟನೇ ನೀಡುತ್ತಾರೆ, ಆದರೇ ಈ ಅಧಿಕಾರಿ ಅರಣ್ಯ ಉಳಿಸುತ್ತಿದ್ದೇನೆ ಎಂದು ಬ್ರಮೇಯಲ್ಲಿಯೇ, ಇದ್ದಾರೆ ಹೊರತು ಬೆಂಕಿಯಿAದ ಸುಟ್ಟ ಅರಣ್ಯವನ್ನು ತರಲಿಕ್ಕೆ ಆಗತ್ತಾ ಇವರಿಗೆ ಸಂಬಳ ನೀಡುವುದು ಇದಕ್ಕೆನಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.


ಇಂದು ಗದಗ ತಾಲೂಕಿನ ನಾಗಾವಿ ಗುಡ್ಡ ಬೆಂಕಿಯಿAದ ಹೊತ್ತಿ ಉರಿದು ಹೊಗಿದೆ , ಅರಣ್ಯ ಇಲಾಖೆಯ ಅಧಿಕಾರಿಗಳ ಅಸಡ್ಡೆ ಎನ್ನಬೇಕೆ? ಅಥವಾ ಅರಣ್ಯ ರಕ್ಷಕರ ಹೆಸರಿನಲ್ಲಿ ರಕ್ಷಣೆಯೇ ಮರೆತರಾ ಈ ಎಲ್ಲಾ ಘಟನೆಗಳು ಜನರಲ್ಲಿ ವಿಚಾರಮಾಡಲು ಎಡೆಮಾಡಿಕೊಟ್ಟದಂತು ನಿಜ. ನಾಗಾವಿಯಿಂದ ಹಿಡಿದು ಜಲಶಂಕರದವರೆಗೂ ಸುಟ್ಟು ಹೋಗಿದೆ. ಇದರ ಹೊಣೆಯನ್ನು ಹೊರುವವರು ಯಾರು? ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವಿಫಲವಾಗಿರುವುದಕ್ಕೆ ಸಾಕ್ಷಿ ಎನ್ನುವಂತಾಗಿದೆ. ಇದಕ್ಕೆ ಅರಣ್ಯ ಇಲಾಖೆ ಸೂಕ್ತ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕನೂನು ಕ್ರಮ ಜರುಗಿಸಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಏ.10 ರಿಂದ ಈ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಸಾರಿಗೆ ಮುಷ್ಕರ ಹೊತ್ತಲ್ಲೇ ಸರ್ಕಾರ ನೈಟ್‍ಕರ್ಫ್ಯೂ ಜಾರಿ ಮಾಡಿದೆ. ಈ ಮೂಲಕ ಜನಸಾಮಾನ್ಯರಿಗೆ ಏಕಕಾಲಕ್ಕೆ ಎರಡು ಆಘಾತ ಕಾದಿದೆ. ಏ.10 ರಿಂದ ರಾಜ್ಯದ 8 ನಗರಗಳಲ್ಲಿ ನೈಟ್‍ಕರ್ಫ್ಯೂ ಹೇರಲಾಗಿದೆ. ಇತ್ತ ಶನಿವಾರದಿಂದ ಸತತ 4 ದಿನ ರಜೆ ಇರುತ್ತದೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ತೀವ್ರ ಸಂಕಷ್ಟ ಎದುರಾಗಿದೆ.

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ದಲಿತರ ಮೇಲೆ ಮಾರಣಾಂತಿಕ ಹಲ್ಲೆ : ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಆಗ್ರಹ

ಉತ್ತರಪ್ರಭ ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ…

ನಿಡಗುಂದಿ: 23 ರಂದು ಉಚಿತ ಆರೋಗ್ಯ, ರಕ್ತದಾನ ಶಿಬಿರ

ನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಹಾಗೂ…