ಬ್ರಿಸ್ಬೇನ್: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್(52) ಶುಕ್ರವಾರದಂದು ನಿಧನರಾಗಿದ್ದಾರೆ.ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ವಾರ್ನ್ ಅವರ ಮಾಧ್ಯಮ ವಕ್ತಾರರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಶೇನ್ ವಾರ್ನ್ ಅವರು  ಶಂಕಿತ  ಹೃದಯಾಘಾತದಿಂದ ಥೈಲ್ಯಾಂಡ್‌ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆ ಎಂದಿದ್ದಾರೆ.
ಅವರು ಶೇನ್ ಅವರ ವಿಲ್ಲಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿದ್ದ ಶೇನ್ ಅವರನ್ನು ಬದುಕಿಸಲು ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾಜಿ  ಕ್ರಿಕೆಟ್ಗನ ನಿಧನದಿಂದ  ಅಭಿಮಾನಿಗಳು ದಿಗ್ಭ್ರಮೆ ಗೊಂಡಿದ್ದಾರೆ.

ಪ್ರೀತಿಯಿಂದ ‘ವಾರ್ನಿ’ ಎಂದು ಕರೆಯಲ್ಪಡುತ್ತಿದ್ದ ಶೇನ್ ವಾರ್ನ್ ಅವರು ಜಗತ್ತಿನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
1992ರಲ್ಲಿ ಜಾಗತಿಕ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟ ವಾರ್ನ್ ಸುಮಾರು 15 ವರ್ಷಗಳ ಕಾಲದ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 145 ಟೆಸ್ಟ್ ಪಂದ್ಯಗಳನ್ನಾಡಿ 708 ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದು ದಾಖಲೆ ಬರೆದಿದ್ದಾರೆ. ವಾರ್ನ್ 1999 ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು. ಒಟ್ಟಾರೆ 1001 ವಿಕೆಟ್ ಗಳಿಸಿದ ಸ್ಪಿನ್ ಮಾಂತ್ರಿಕ. 194 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 293 ವಿಕೆಟ್ ಕಿತ್ತಿದ್ದಾರೆ.2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿದ ಬಳಿಕ ಕೌಂಟಿ ಕ್ರಿಕೆಟ್, ಇಂಡಿಯನ್ ಪ್ರೀಮಿಯರ್ ಲೀಗ್ ಗಳಲ್ಲಿ ಸಕ್ರಿಯರಾಗಿದ್ದರು. ಜೊತೆಗೆ ಕಾಮೆಂಟ್ರಿ ಕೂಡಾ ಮಾಡುತ್ತಿದ್ದರು. ಐಪಿಎಲ್ ನಲ್ಲಿ ಕ್ಯಾಪ್ಟನ್ ಕಮ್ ಕೋಚ್ ಅಚ್ಚರಿ ಮೂಡಿಸಿದರು. 2008ರ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಕಪ್ ಗೆಲ್ಲುವಂತೆ ಮಾಡಿದರು. 2018ರಲ್ಲಿ ರಾಜಸ್ಥಾನ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.

2021ರ ಆಗಸ್ಟ್ ತಿಂಗಳಲ್ಲಿ ಲಂಡನ್ ಸ್ಪಿರಿಟ್ ತಂಡದ ಕೋಚ್ ಆಗಿದ್ದ ಶೇನ್ ವಾರ್ನ್ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದರು. ನವೆಂಬರ್ ತಿಂಗಳಲ್ಲಿ ತಮ್ಮ ಮಗ ಜಾಕ್ಸನ್ ಜೊತೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಗಾಯಗೊಂಡಿದ್ದರು. ಆದರೆ, ಯಾವುದೇ ಮಾರಣಾಂತಿಕ ಗಾಯಗಳಾಗಿರಲಿಲ್ಲ. ಇತ್ತೀಚೆಗೆ ಥೈಲ್ಯಾಂಡಿನ ಕೊಯ್ ಸಮುಯಿಯ ವಿಲ್ಲಾದಲ್ಲಿದ್ದ ಶೇನ್ ಅವರು ನಿಧನರಾಗಿರುವ ರೀತಿಯ ಬಗ್ಗೆ ಶಂಕೆ ಮೂಡಿದೆ.ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದಲ್ಲಿ ಜನಿಸಿದ ಶೇನ್ ವಾರ್ನ್ ವರ್ಣಮಯ ಬದುಕು ಕಂಡವರು, ಅನೇಕರು  ಸಂತಾಪ ವ್ಯಕ್ತಪಡಿಸಿದ್ದಾರೆ.



Leave a Reply

Your email address will not be published. Required fields are marked *

You May Also Like

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ಕೆಎಸ್ಆರ್ ಟಿ ಸಿ ಬ್ರ್ಯಾಂಡ್ ಕರ್ನಾಟಕದ ಕೈ ತಪ್ಪಿಲ್ಲ : ಸಚಿವ ಸವದಿ ಸ್ಪಷ್ಟನೆ

ಕೆಎಸ್ಆರ್ ಟಿಸಿ ಪದ ಮತ್ತು ಲೋಗೋವನ್ನು ಕೇರಳಪಾಲಾಗಿದೆ ಎಂಬ ಸುದ್ದಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಕರಿಸಿದ್ದಾರೆ.

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.