ಗದಗ: ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಕೇಲೂರು ಗ್ರಾಮದಲ್ಲಿ ರೈತರ ಮೇಲೆ ದೌರ್ಜನ್ಯ ಎಸಗಿ ಅವರ ಹೊಲವನ್ನು ಕಸಿದುಕೊಳ್ಳಲು ಯತ್ನಿಸಿದಾಗ ರೈತ ಮಹಿಳೆಯರು ಮತ್ತು ಅಲ್ಲಿದ್ದ ಎಲ್ಲರು ಪರಿ ಪರಿಯಾಗಿ ಬೇಡಿಕೊಂಡರು ಅದನ್ನು ಕ್ಯಾರೆ ಅನ್ನದ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅವರ ಮೇಲೆ ದೌರ್ಜನ್ಯ ಮಾಡಿ ಅವರನ್ನು ಹೆದರಿಸಿ ಬೆದರಿಸಿದ. ಬೆನ್ನಲ್ಲೇ ಮನನೋಂದು ಇಬ್ಬರು ಮಹಿಳೆಯರು ವಿಷಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದರು ಅವರನ್ನು ಆಸ್ಪತ್ರೆಗೆ ಸಾಗಿಸದೇ ಇರುವುದು ಅಧಿಕಾರಿಗಳ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ. ಇಬ್ಬರು ಮಹಿಳೆಯರಾದ 1. ಸರೋಜವ್ವ ಶಾಂತಗೌಡ ಪಾಟೀಲ 2. ನಿರ್ಮಲಾ ರಾಮನಗೌಡ ಪಾಟೀಲ ಹೊಲ ಹೋದ ಮೇಲೆ ಬದುಕಿ ಎನೂ ಪ್ರಯೋಜನ ಎಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಲೂರು ಗ್ರಾಮದಲ್ಲಿ ನಡೆದಿದೆ. ಅವರನ್ನು ಅಸ್ಪತ್ರೆಗೆ ಸ್ಥಳಿಯರು ಸಾಗಿದ್ದಾರೆ ಆದರೂ ಅವರ ಸ್ಥಿತಿ ಗಂಭಿರ ಎಂದು ತಿಳಿದು ಬಂದಿದೆ. ಜಿಲ್ಲಾಧಿಕಾರಿಗಳು ಈ ಘಟನೆಯ ಬಗ್ಗೆ ಗಮನಿಸಿದಿರುವುದು. ಜಿಲ್ಲಾಡಳಿತದ ಕಾರ್ಯ ವೈಖರಿಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆ ಗಾಗಿ ಗದಗ ಆಸ್ಪತ್ರೆಗೆ ದಾಖಲು ಮಾಡಲು ಶಿಫಾರಸ್ಸು ಮಾಡಿದ್ದಾರೆ.

ಅರಣ್ಯ ಅಧಿಕಾರಿ ಊಟಮಾಡುತ್ತಾ ಕುಳಿತದ್ದು ಅವನ ಕ್ರೌರ್ಯಕ್ಕೆ ಅಲ್ಲಿಯ ಜನರು ಶಾಪ ಹಾಕುತ್ತಿದ್ದಾರೆ.
ಈಗಲಾದರೂ ಅರಣ್ಯ ಇಲಾಖೆ ತನ್ನ ದೌರ್ಜನ್ಯವನ್ನು ನಿಲ್ಲಿಸುತ್ತಾ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಪಡಿತರ ಚೀಟಿದಾರರಿಗೆ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ವಸತಿ ನಿಲಯಕ್ಕೆ ಅರ್ಜಿ: ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಸ್ಕಿ: ಚನ್ನಬಸವ ಕುಟುಂಬಕ್ಕೆ ಸಹಾಯಧನ ವಿತರಣೆ

ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು. ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ಕಾರ್ಮಿಕರಿಗೆ ಆಹಾರ ಸಾಮಗ್ರಿ ವಿತರಣೆ

ಲಕ್ಷ್ಮೇಶ್ವರ: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ…