ಗದಗ: ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಕೇಲೂರು ಗ್ರಾಮದಲ್ಲಿ ರೈತರ ಮೇಲೆ ದೌರ್ಜನ್ಯ ಎಸಗಿ ಅವರ ಹೊಲವನ್ನು ಕಸಿದುಕೊಳ್ಳಲು ಯತ್ನಿಸಿದಾಗ ರೈತ ಮಹಿಳೆಯರು ಮತ್ತು ಅಲ್ಲಿದ್ದ ಎಲ್ಲರು ಪರಿ ಪರಿಯಾಗಿ ಬೇಡಿಕೊಂಡರು ಅದನ್ನು ಕ್ಯಾರೆ ಅನ್ನದ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅವರ ಮೇಲೆ ದೌರ್ಜನ್ಯ ಮಾಡಿ ಅವರನ್ನು ಹೆದರಿಸಿ ಬೆದರಿಸಿದ. ಬೆನ್ನಲ್ಲೇ ಮನನೋಂದು ಇಬ್ಬರು ಮಹಿಳೆಯರು ವಿಷಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದರು ಅವರನ್ನು ಆಸ್ಪತ್ರೆಗೆ ಸಾಗಿಸದೇ ಇರುವುದು ಅಧಿಕಾರಿಗಳ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ. ಇಬ್ಬರು ಮಹಿಳೆಯರಾದ 1. ಸರೋಜವ್ವ ಶಾಂತಗೌಡ ಪಾಟೀಲ 2. ನಿರ್ಮಲಾ ರಾಮನಗೌಡ ಪಾಟೀಲ ಹೊಲ ಹೋದ ಮೇಲೆ ಬದುಕಿ ಎನೂ ಪ್ರಯೋಜನ ಎಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಲೂರು ಗ್ರಾಮದಲ್ಲಿ ನಡೆದಿದೆ. ಅವರನ್ನು ಅಸ್ಪತ್ರೆಗೆ ಸ್ಥಳಿಯರು ಸಾಗಿದ್ದಾರೆ ಆದರೂ ಅವರ ಸ್ಥಿತಿ ಗಂಭಿರ ಎಂದು ತಿಳಿದು ಬಂದಿದೆ. ಜಿಲ್ಲಾಧಿಕಾರಿಗಳು ಈ ಘಟನೆಯ ಬಗ್ಗೆ ಗಮನಿಸಿದಿರುವುದು. ಜಿಲ್ಲಾಡಳಿತದ ಕಾರ್ಯ ವೈಖರಿಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆ ಗಾಗಿ ಗದಗ ಆಸ್ಪತ್ರೆಗೆ ದಾಖಲು ಮಾಡಲು ಶಿಫಾರಸ್ಸು ಮಾಡಿದ್ದಾರೆ.

ಅರಣ್ಯ ಅಧಿಕಾರಿ ಊಟಮಾಡುತ್ತಾ ಕುಳಿತದ್ದು ಅವನ ಕ್ರೌರ್ಯಕ್ಕೆ ಅಲ್ಲಿಯ ಜನರು ಶಾಪ ಹಾಕುತ್ತಿದ್ದಾರೆ.
ಈಗಲಾದರೂ ಅರಣ್ಯ ಇಲಾಖೆ ತನ್ನ ದೌರ್ಜನ್ಯವನ್ನು ನಿಲ್ಲಿಸುತ್ತಾ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ಡಾ.ಮಮ್ತಾಜ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ನಿವೃತ್ತ ಪ್ರೊಫೆಸರ್ ಮಮ್ತಾಜ್ ಅಲಿಖಾನ್ (94) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕೋವಿಡ್ ಮೊದಲ ಸಾವು : ಕೈ ಸೇರದ ಪಾಸಿಟಿವ್ ವರದಿ

ದೇಶದಲ್ಲೇ ಮೊದಲಬಾರಿಗೆ ಕೋರೊನಾ ಸಂಕಿನಿಂದ ಮೃತಪಟ್ಟ ಮೊಹಮದ್ದ ಹುಸೇನ್ ಸಿದ್ದಿಕ (76) ಅವರ ಕೊವಿಡ್ ಪಾಸಿಟಿವ್ ವರದಿ ಇನ್ನೂ ಅವರ ಕುಟುಂಬದ ಕೈಗೆ ತಲುಪಿಲ್ಲ.