ಗದಗ: ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಕೇಲೂರು ಗ್ರಾಮದಲ್ಲಿ ರೈತರ ಮೇಲೆ ದೌರ್ಜನ್ಯ ಎಸಗಿ ಅವರ ಹೊಲವನ್ನು ಕಸಿದುಕೊಳ್ಳಲು ಯತ್ನಿಸಿದಾಗ ರೈತ ಮಹಿಳೆಯರು ಮತ್ತು ಅಲ್ಲಿದ್ದ ಎಲ್ಲರು ಪರಿ ಪರಿಯಾಗಿ ಬೇಡಿಕೊಂಡರು ಅದನ್ನು ಕ್ಯಾರೆ ಅನ್ನದ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅವರ ಮೇಲೆ ದೌರ್ಜನ್ಯ ಮಾಡಿ ಅವರನ್ನು ಹೆದರಿಸಿ ಬೆದರಿಸಿದ. ಬೆನ್ನಲ್ಲೇ ಮನನೋಂದು ಇಬ್ಬರು ಮಹಿಳೆಯರು ವಿಷಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದರು ಅವರನ್ನು ಆಸ್ಪತ್ರೆಗೆ ಸಾಗಿಸದೇ ಇರುವುದು ಅಧಿಕಾರಿಗಳ ಕ್ರೌರ್ಯಕ್ಕೆ ಸಾಕ್ಷಿಯಾಗಿದೆ. ಇಬ್ಬರು ಮಹಿಳೆಯರಾದ 1. ಸರೋಜವ್ವ ಶಾಂತಗೌಡ ಪಾಟೀಲ 2. ನಿರ್ಮಲಾ ರಾಮನಗೌಡ ಪಾಟೀಲ ಹೊಲ ಹೋದ ಮೇಲೆ ಬದುಕಿ ಎನೂ ಪ್ರಯೋಜನ ಎಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೆಲೂರು ಗ್ರಾಮದಲ್ಲಿ ನಡೆದಿದೆ. ಅವರನ್ನು ಅಸ್ಪತ್ರೆಗೆ ಸ್ಥಳಿಯರು ಸಾಗಿದ್ದಾರೆ ಆದರೂ ಅವರ ಸ್ಥಿತಿ ಗಂಭಿರ ಎಂದು ತಿಳಿದು ಬಂದಿದೆ. ಜಿಲ್ಲಾಧಿಕಾರಿಗಳು ಈ ಘಟನೆಯ ಬಗ್ಗೆ ಗಮನಿಸಿದಿರುವುದು. ಜಿಲ್ಲಾಡಳಿತದ ಕಾರ್ಯ ವೈಖರಿಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆ ಗಾಗಿ ಗದಗ ಆಸ್ಪತ್ರೆಗೆ ದಾಖಲು ಮಾಡಲು ಶಿಫಾರಸ್ಸು ಮಾಡಿದ್ದಾರೆ.

ಅರಣ್ಯ ಅಧಿಕಾರಿ ಊಟಮಾಡುತ್ತಾ ಕುಳಿತದ್ದು ಅವನ ಕ್ರೌರ್ಯಕ್ಕೆ ಅಲ್ಲಿಯ ಜನರು ಶಾಪ ಹಾಕುತ್ತಿದ್ದಾರೆ.
ಈಗಲಾದರೂ ಅರಣ್ಯ ಇಲಾಖೆ ತನ್ನ ದೌರ್ಜನ್ಯವನ್ನು ನಿಲ್ಲಿಸುತ್ತಾ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಗದಗ ಜಿಲ್ಲೆಯ ನಾಲ್ಕು ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ರೋಣ ತಾಲ್ಲೂಕಿನ ಇಟಗಿ ಗ್ರಾಮದ ವಾರ್ಡ ನಂ. 4ರ ಎರಡು ಪ್ರದೇಶಗಳನ್ನು, ಲಕ್ಷ್ಮೇಶ್ವರ…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…