ರೂ. 5 ಲಕ್ಷ ಪರಿಹಾರ

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ಯೋಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ ಎಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲರು ವಿಷಾದಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಸರೋಜ ಪಾಟೀಲ) ಮಹಿಳೆಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಈಗಾಗಲೇ ಮೃತ ಮಹಿಳೆಯ (ಶ್ರೀಮತಿ ನಿರ್ಮಲ ಪಾಟೀಲ) ಕುಟುಂಬದ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವೂ ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ಮತ್ತು ನಿಯಮಾನುಸಾರವಾಗಿ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ರೂ. 5 ಲಕ್ಷ ಪರಿಹಾರ

ಈ ಘಟನೆಯ ಬಗ್ಗೆ ತಾವು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.

ಪಿಎಲ್‍ಡಿ, ಕಸ್ಕಾರ್ಡ್ ಬ್ಯಾಂಕ್‍ನ ಸುಸ್ತಿ ಸಾಲದ ಅಸಲು ಪಾವತಿಸಲು ಸೂಚನೆ

ಜಿಲ್ಲೆಯ ಪಿಎಲ್‍ಡಿ/ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ಎಲ್ಲ ಸುಸ್ತಿ ಸಾಲಗಾರರು ಜೂ.30ರೊಳಗೆ ಸುಸ್ತಿ ಸಾಲದ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಕೆ.ರಾಯನಗೌಡ್ರ ತಿಳಿಸಿದರು.