ರೂ. 5 ಲಕ್ಷ ಪರಿಹಾರ

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ಯೋಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ ಎಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲರು ವಿಷಾದಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಸರೋಜ ಪಾಟೀಲ) ಮಹಿಳೆಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಈಗಾಗಲೇ ಮೃತ ಮಹಿಳೆಯ (ಶ್ರೀಮತಿ ನಿರ್ಮಲ ಪಾಟೀಲ) ಕುಟುಂಬದ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವೂ ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ಮತ್ತು ನಿಯಮಾನುಸಾರವಾಗಿ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ರೂ. 5 ಲಕ್ಷ ಪರಿಹಾರ

ಈ ಘಟನೆಯ ಬಗ್ಗೆ ತಾವು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಗೋಹತ್ಯೆ ನಿಷೇಧದಿಂದ ರೈತರಿಗೆ ಲಾಭ ; ಸಚಿವ ಚವ್ಹಾಣ್

ದೀಪಾವಳಿಗೆ ಗೋಮಾತೆ ಪೂಜಿಸುತ್ತೀರಿ, ಸಂಕ್ರಾಂತಿಗೆ ಪೂಜೆ ಮಾಡ್ತೀರಿ ಮತ್ತೆ ಗೋಮಾತೆಯನ್ನು ಕಟ್ ಯಾಕ್ ಮಾಡ್ತೀರಿ, ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸಿದರು.

2 ಅಪರೂಪದ ಆಮೆ ಪತ್ತೆ: ಒಂದು ಹಳದಿ ಬಣ್ಣದ್ದು, ಇನ್ನೊಂದು ಮೃದು ಚಿಪ್ಪಿನದ್ದು!

ಕಪ್ಪು, ದಟ್ಟ ಕಂದು ಬಣ್ಣದ ಆಮೆಗಳನ್ನು ನೋಡಿದ್ದೇವೆ. ಆದರೆ ಒರಿಸ್ಸಾದಲ್ಲೊಂದು ಅಪರೂಪದ ಆಮೆ ಸಿಕ್ಕಿದೆ. ಅದರ ಬಣ್ಣ ಹಳದಿ. ಇಡೀ ದೇಹ, ಚಿಪ್ಪು ಎಲ್ಲವೂ ಸಂಪೂರ್ಣ ಹಳದಿ.