ರೂ. 5 ಲಕ್ಷ ಪರಿಹಾರ

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ಯೋಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ ಎಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲರು ವಿಷಾದಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಸರೋಜ ಪಾಟೀಲ) ಮಹಿಳೆಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಈಗಾಗಲೇ ಮೃತ ಮಹಿಳೆಯ (ಶ್ರೀಮತಿ ನಿರ್ಮಲ ಪಾಟೀಲ) ಕುಟುಂಬದ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವೂ ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ಮತ್ತು ನಿಯಮಾನುಸಾರವಾಗಿ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ರೂ. 5 ಲಕ್ಷ ಪರಿಹಾರ

ಈ ಘಟನೆಯ ಬಗ್ಗೆ ತಾವು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಮೂರುಸಾವಿರಮಠ ಮತ್ತು ಆಸ್ತಿಗಳ ವಿಚಾರ: ಬಹಿರಂಗ ಚರ್ಚೆಗೆ ದಿಂಗಾಲೇಶ್ವರ ಶ್ರೀಗಳ ಆವ್ಹಾನ

ಶ್ರೀ ಜಗದ್ಗುರು ಮಾರುಸಾವಿರಮಠದ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಪಟ್ಟ ವಿಚಾರವಾಗಿ ಹೇಳಿಕೆ ನೀಡುವ ಯಾವುದೇ ವ್ಯಕ್ತಿಗಳು ನಮ್ಮೊಂದಿಗೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಶ್ರೀಗಳು ತಿಳಿಸಿದ್ದಾರೆ.