ಲೇಖಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಗೆ ‘ಕದಳಿಶ್ರೀ’ ಪ್ರಶಸ್ತಿ

ಉತ್ತರಪ್ರಭ

ಶಿರಹಟ್ಟಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ಮುಂಡರಗಿ ಇವುಗಳ ವತಿಯಿಂದ 2022 ರ “ಕದಳಿಶ್ರೀ” ಪ್ರಶಸ್ತಿಗೆ, ಶಿರಹಟ್ಟಿ ಪಟ್ಟಣದ, ಲೇಖಕರು, ಅತ್ಯುತ್ತಮ ವಾಗ್ಮಿಗಳಾಗಿರುವ ಎಫ್ ಎಂ ಡಬಾಲಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮುಂಡರಗಿಯ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ನೆರವೇರಲಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

Exit mobile version