ಉತ್ತರಪ್ರಭ ಸುದ್ದಿ

ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ ಘಟನೆ ಗುರುವಾರ ಜರುಗಿದೆ.

ಗ್ರಾಮದ ಪ್ರವೀಣಗೌಡ ನಿಂಗನಗೌಡ ಪಾಟೀಲ(೪೦) ಮೃತ ದುರ್ದೈವಿ. ಕಳೆದ ೫-೬ ವರ್ಷದಿಂದ ಬೆಳ್ಳಟ್ಟಿಯ ಕೆ.ವಿ.ಜಿ, ಲಕ್ಷ್ಮೇಶ್ವರದ ಪಿಎಲ್ಡಿ, ಮುಂಡರಗಿಯ ಐಡಿಎಫ್ಸಿ ಬ್ಯಾಂಕ್ಗಳಲ್ಲಿ ಸುಮಾರು ೬-೭ ಲಕ್ಷ ಬೆಳೆಸಾಲ ತೆಗೆದುಕೊಂಡಿದ್ದ. ಬೆಳೆ ಚೆನ್ನಾಗಿ ಬಾರದೆ ಮಾಡಿದ ಸಾಲವನ್ನು ಹೇಗೆ ತಿರಿಸುವುದು ಎಂದು ಮನನೊಂದು ತನ್ನ ಹೊಲದಲ್ಲಿರುವ ಗಿಡಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತು ಶಿರಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ದಲಿತರು ಕುಡಿದ ಚಹಾ ಕಪ್ ತೊಳೆದ ತಹಶೀಲ್ದಾರ

ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.

ವೈದ್ಯಕೀಯ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ರಾಜ್ಯದಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ..!

ಉತ್ತರಪ್ರಭ ಸುದ್ದಿ ಕೊಪ್ಪಳ: ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ…

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…