ಉತ್ತರಪ್ರಭ ಸುದ್ದಿ

ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ ಘಟನೆ ಗುರುವಾರ ಜರುಗಿದೆ.

ಗ್ರಾಮದ ಪ್ರವೀಣಗೌಡ ನಿಂಗನಗೌಡ ಪಾಟೀಲ(೪೦) ಮೃತ ದುರ್ದೈವಿ. ಕಳೆದ ೫-೬ ವರ್ಷದಿಂದ ಬೆಳ್ಳಟ್ಟಿಯ ಕೆ.ವಿ.ಜಿ, ಲಕ್ಷ್ಮೇಶ್ವರದ ಪಿಎಲ್ಡಿ, ಮುಂಡರಗಿಯ ಐಡಿಎಫ್ಸಿ ಬ್ಯಾಂಕ್ಗಳಲ್ಲಿ ಸುಮಾರು ೬-೭ ಲಕ್ಷ ಬೆಳೆಸಾಲ ತೆಗೆದುಕೊಂಡಿದ್ದ. ಬೆಳೆ ಚೆನ್ನಾಗಿ ಬಾರದೆ ಮಾಡಿದ ಸಾಲವನ್ನು ಹೇಗೆ ತಿರಿಸುವುದು ಎಂದು ಮನನೊಂದು ತನ್ನ ಹೊಲದಲ್ಲಿರುವ ಗಿಡಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತು ಶಿರಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಶೀತ ಜ್ವರ ಸೋಂಕಿತರ ಸಂಖ್ಯೆ: ಗದಗ,ಕೊಪ್ಪಳ,ಧಾರವಾಡ ಸೇರಿ ಹಲವು ಜಿಲ್ಲೆಯಲ್ಲೂ ಸಮೀಕ್ಷೆ..!

ಬೆಂಗಳೂರು : ರಾಜ್ಯದಲ್ಲಿ ಶೀತ ಜ್ವರ ಸೋಂಕಕಿನಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ…

ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ…