ಉತ್ತರಪ್ರಭ

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿಷಪ್ರಾಷನಕ್ಕೆ ಪ್ರಯತ್ನಿಸಿದ ಘಟನೆ ಜರುಗಿತ್ತು. ಈ ಘಟನೆಯಲ್ಲಿ ಮೃತರಾದ ನಿರ್ಮಲ ಪಾಟೀಲ ಅವರ ಕುಟುಂಬ ಸದಸ್ಯರನ್ನು ಶುಕ್ರವಾರ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಭೇಟಿ ಮಾಡಿ ವಿಚಾರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ಮಹಿಳೆಯ ಮಕ್ಕಳಿಗೆ ಸ್ಥಳೀಯವಾಗಿ ಜಿಲ್ಲಾಡಳಿತದಿಂದ ಶಿಕ್ಷಣ ಕೊಡಿಸುವದು ವ್ಯವಸ್ಥೆ ಸೇರಿದಂತೆ ಕುಟುಂಬಕ್ಕೆ ಸರ್ಕಾರದ ವಿವಿಧ ಯೋಜನೆಗಳ ಸಹಾಯ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ 4,12,500 ರೂ. ಗಳ‌ ಪರಿಹಾರ ಚೆಕನ್ನು ವಿತರಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ತಹಶೀಲ್ದಾರ್ ಆಶಪ್ಪ ಪೂಜಾರ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಎಲ್ಲ ಸಮುದಾಯಗಳ ಅಭಿವೃದ್ಧಿ ಪರ ಬಜೆಟ್ : ಕಾಂತಿಲಾಲ ಬನ್ಸಾಲಿ

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು 2021-22ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.

ಗದಗ ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 243…

ಮತಗಟ್ಟೆ ವಿಭಜನೆಯಲ್ಲಿ ಜಿಲ್ಲಾಡಳಿತ ವಿಫಲ: ಸಾಗದ ಸರದಿ ಸಾಲು

ಉತ್ತರಪ್ರಭ ಸುದ್ದಿ ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ…

ಮೇ.31 ರಂದು ರೋಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ರೋಣ: ರಾಜೀವ್ ಗಾಂಧಿ ಆಯುರ್ವೇದಿಕ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗುವದು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.