ಉತ್ತರಪ್ರಭ ಸುದ್ದಿ
ಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು ದಿನಾಂಕ: ಮಾರ್ಚ 22ರಂದು ವಿಧಾನಸೌಧ ಚಲೋ ಹೋರಾಟವನ್ನು ಕುರುಬ ಸಮಾಜದ ಸಂಘಟನೆಗಳು ಹಮ್ಮಿಕೊಂಡಿದ್ದಾರೆ.
ಇತ್ತೀಚಿಗೆ ಸಂಚಾರಿ ಕುರಿಗಾಹಿ ಮಹಿಳೆಯಾದ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಘಟನೆ ನಡೆದಿದ್ದು ಆರೋಪಿಗಳನ್ನು ಬಂಧಿಸಬೇಕು ಮತ್ತು ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು. ಕುರಿಗಾಹಿಗಳ ಆತ್ಮ ರಕ್ಷಣೆಗಾಗಿ ಬಂದೂಕಿನ ಪರವಾನಿಗೆ ಹಾಗೂ ಸರಕಾರದಿಂದ ಉಚಿತವಾಗಿ ಬಂದೂಕನ್ನು ನೀಡಬೇಕು. ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಲ್ಲಿ ಪ್ರಾತಿನಿಧ್ಯವನ್ನು ಮತ್ತು ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು. ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತೀಕ್ರಮಣ ಮಾಡಿರುವದನ್ನು ತೆರವುಗೊಳಿಸಬೇಕು. ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು. ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಈ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು. ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕ ಮಾಡವುದು. ಪ್ರತಿ ತಾಲೂಕಿನಲ್ಲಿ ಒಂದರAತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯುವುದು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸಗಳನ್ನು ಹೋಬಳಿಗೆ ನೀಡಬೇಕೆಂದು ಸಿದ್ದಣ ತೇಜಿ ರಾಜ್ಯಸಂಚಾಲಕರು, ಕುರುಬ ಸಮಾಜದ ಸಂಘಟನೆಗಳ ಒಕ್ಕೂಟ, ಬೆಂಗಳೂರು, ಪತ್ರಿಕಾ ಗೋಷ್ಠಿಯ ಮೂಲಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಶಿವಾನಂದ ಮಾಯಣ್ಣವರ, ಪರಸಪ್ಪ ಗುರಿಕಾರ, ಯಲ್ಲಪ್ಪ ಹೆಗಡೆ, ಚನ್ನಬಸು ಹುಲಜೋಗಿ ಹಾಗೂ ಕುರುಬ ಸಮಾಜದ ಸಂಘಟನೆಯ ಮುಖಂಡರು, ಸದಸ್ಯರುಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ನಕಲಿ ಪೇಸ್ಬುಕ್ ಸಂದೇಶ!

ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…