ಉತ್ತರಪ್ರಭ ಸುದ್ದಿ
ಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು ದಿನಾಂಕ: ಮಾರ್ಚ 22ರಂದು ವಿಧಾನಸೌಧ ಚಲೋ ಹೋರಾಟವನ್ನು ಕುರುಬ ಸಮಾಜದ ಸಂಘಟನೆಗಳು ಹಮ್ಮಿಕೊಂಡಿದ್ದಾರೆ.
ಇತ್ತೀಚಿಗೆ ಸಂಚಾರಿ ಕುರಿಗಾಹಿ ಮಹಿಳೆಯಾದ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿರುವ ಘಟನೆ ನಡೆದಿದ್ದು ಆರೋಪಿಗಳನ್ನು ಬಂಧಿಸಬೇಕು ಮತ್ತು ರಾಜ್ಯದಲ್ಲಿ ಕುರಿಗಾಹಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಹಿಡೆಯಲು ದೌರ್ಜನ್ಯ ಕಾಯ್ದೆಯನ್ನು ಜಾರಿಗೆ ತರಬೇಕು. ಕುರಿಗಾಹಿಗಳ ಆತ್ಮ ರಕ್ಷಣೆಗಾಗಿ ಬಂದೂಕಿನ ಪರವಾನಿಗೆ ಹಾಗೂ ಸರಕಾರದಿಂದ ಉಚಿತವಾಗಿ ಬಂದೂಕನ್ನು ನೀಡಬೇಕು. ಕುರಿಗಾಹಿಗಳ ದೂರುಗಳನ್ನು ಆಲಿಸಲು ಪ್ರತಿ ತಿಂಗಳು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುರಿಗಾಹಿಗಳ ಸಭೆ ಮಾಡಬೇಕು. ಕುರಿಗಾಹಿ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಲ್ಲಿ ಪ್ರಾತಿನಿಧ್ಯವನ್ನು ಮತ್ತು ಆಕಸ್ಮಿಕ ದುರ್ಘಟನೆಗಳು ನಡೆದಾಗ ಪರಿಹಾರ ನೀಡಲು ಕುರಿಗಾರ ಹಿತರಕ್ಷಣೆಗಾಗಿ ಶಾಶ್ವತವಾದ ಪರಿಹಾರ ನಿಧಿಯನ್ನು ಸ್ಥಾಪಿಸಬೇಕು. ಸರಕಾರವು ಪಶುಸಂಗೋಪನೆಗಳ ಆಹಾರಕ್ಕಾಗಿ ಮೀಸಲಾಗಿರುವ ಗೋಮಾಳ ಜಾಗವನ್ನು ಸಂರಕ್ಷಣೆ ಹಾಗೂ ಅತೀಕ್ರಮಣ ಮಾಡಿರುವದನ್ನು ತೆರವುಗೊಳಿಸಬೇಕು. ಅನುಗ್ರಹ ಯೋಜನೆಗಳ ಪರಿಹಾರ ನಿಧಿಯ ಮೊತ್ತವನ್ನು 5ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಬೇಕು. ಗುಣಮಟ್ಟದ ಔಷಧಿಗಳನ್ನು ಕಾಲಕಾಲಕ್ಕೆ ಕುರಿಗಳಿಗೆ ಪಿ.ಪಿ.ಆರ್.ಈ.ಟಿ., ನೀಲಿ ನಾಲಿಗೆ ರೋಗದ ಲಸಿಕೆಗಳನ್ನು ಪೂರೈಸಬೇಕು. ಪಶುವೈದ್ಯಕೀಯ ಇಲಾಖೆಯಲ್ಲಿ ಇರುವ ಜಾನುವಾರಗಳ ಸಂಖ್ಯೆಯ ಅನುಗುಣವಾಗಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕ ಮಾಡವುದು. ಪ್ರತಿ ತಾಲೂಕಿನಲ್ಲಿ ಒಂದರAತೆ ರೋಗ ತಪಾಸಣಾ ಕೇಂದ್ರಗಳನ್ನು ತೆರೆಯುವುದು. ತುರ್ತು ತಪಾಸಣೆಗಾಗಿ ಅಂಬ್ಯೂಲೆನ್ಸಗಳನ್ನು ಹೋಬಳಿಗೆ ನೀಡಬೇಕೆಂದು ಸಿದ್ದಣ ತೇಜಿ ರಾಜ್ಯಸಂಚಾಲಕರು, ಕುರುಬ ಸಮಾಜದ ಸಂಘಟನೆಗಳ ಒಕ್ಕೂಟ, ಬೆಂಗಳೂರು, ಪತ್ರಿಕಾ ಗೋಷ್ಠಿಯ ಮೂಲಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಶಿವಾನಂದ ಮಾಯಣ್ಣವರ, ಪರಸಪ್ಪ ಗುರಿಕಾರ, ಯಲ್ಲಪ್ಪ ಹೆಗಡೆ, ಚನ್ನಬಸು ಹುಲಜೋಗಿ ಹಾಗೂ ಕುರುಬ ಸಮಾಜದ ಸಂಘಟನೆಯ ಮುಖಂಡರು, ಸದಸ್ಯರುಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರ ಆಯ್ಕೆ

ಉತ್ತರಪ್ರಭ ಸುದ್ದಿಶಿರಹಟ್ಟಿ : ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ…