ಉತ್ತರಪ್ರಭ

ಕಾರಟಗಿ: ರಾಜ್ಯ ಅಧ್ಯಕ್ಷರಾದ ಆರ್.ಮೋಹನ್ ರಾಜ್, ರಾಜು.ಎಮ್.ತಳವಾರ ಅವರ ಆದೇಶದ ಮೇರೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ಹುಳ್ಕಿಹಾಳ ಗ್ರಾಮದ ದೇವರಾಜ ಉಳೇನೂರನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣದ ಹೊರವಲಯದ ಪರಿವೀಕ್ಷಣಾ ಮಂದಿರದಲ್ಲಿ ಡಿಎಸ್ಎಸ್ ಸಂಘಟನೆಯ ಬಲವರ್ಧನೆಗೆ ಕರೆಯಲಾಗಿದ್ದ ಪದಾಧಿಕಾರಿಗಳ ಸಭೆಯಲ್ಲಿ ಕೊಪ್ಪಳ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಮಂಜುನಾಥ ಆರತಿ ಮಾತನಾಡಿ ಡಿಎಸ್ಎಸ್ ಭೀಮವಾದ ಸಂಘಟನೆಯ ಜಿಲ್ಲಾ ಸಂಚಾಲಕರನ್ನಾಗಿ ದೇವರಾಜ ಹುಳ್ಕಿಹಾಳ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪದಾಧಿಕಾರಿಗಳ ಪಟ್ಟಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಮಂಜುನಾಥ ಆರತಿ, ದೇವಪ್ಪ ಕರಡಿ, ಶಾಂತಪ್ಪ ಕನಕಗಿರಿರನ್ನು ಆಯ್ಕೆ ಮಾಡಲಾಗಿದ್ದು ಜಿಲ್ಲಾ ಸಲಹಾ ಸಮಿತಿ ಸದಸ್ಯರನ್ನಾಗಿ ಯಮನೂರಪ್ಪ ಪೂಜಾರಿ, ಕೆಂಚಪ್ಪ ವೀರಪುರರನ್ನು ಆಯ್ಕೆ ಮಾಡಲಾಗಿದೆ.

ಹಾಗೂ ಕಾರಟಗಿ ತಾಲೂಕ ಪದಾಧಿಕಾರಿಗಳ ಆಯ್ಕೆ ಪಟ್ಟಿಯಲ್ಲಿ ತಾಲೂಕ ಅಧ್ಯಕ್ಷರಾಗಿ ಹನುಮಂತಪ್ಪ ನಾಗನಕಲ್, ತಾಲೂಕ ಸಂಘಟನಾ ಸಂಚಾಲಕರಾಗಿ ಶಿವರಾಜ ಉಳೆನೂರು, ರಾಜು ಸಂತೋಷರನ್ನು ಆಯ್ಕೆ ಮಾಡಲಾಗಿದ್ದು, ಖಜಾಂಚಿಯಾಗಿ ಬಸವರಾಜ ಕಾರಟಗಿ ಹಾಗೂ ಬಸವರಾಜ ಈಳಿಗನೂರುರನ್ನು ಆಯ್ಕೆ ಮಾಡಿದ್ದಾರೆಂದು ತಿಳಿಸಿದರು.

ನಂತರ ಕೊಪ್ಪಳ ಜಿಲ್ಲೆಯ ನೂತನ ಸಂಘಟನಾ ಸಂಚಾಲಕ ದೇವರಾಜ ಉಳೇನೂರು ಮಾತನಾಡಿ ಜಿಲ್ಲೆಯ ಸಂಪೂರ್ಣ ಜವಾಬ್ದಾರಿಯನ್ನು ಅಧ್ಯಕ್ಷರನ್ನಾಗಿ ವಹಿಸಿದ್ದಾರೆ. ಜಿಲ್ಲೆಯ ದಲಿತ ಸಮುದಾಯದ ಪರವಾಗಿ ಅವರ ಮೇಲೆ ನಡೆಯುವ ಅನ್ಯಾಯ ಶೋಷಣೆಯ ವಿರುದ್ಧ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನನ್ನ ಸ್ಥಾನ ದೊರೆಯುವಂತೆ ಮಾಡಿದ ರಾಜ್ಯ ಜಿಲ್ಲಾ ತಾಲ್ಲೂಕು ಎಲ್ಲಾ ಪದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸುತ್ತೆನೆ ಎಂದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಯ ಮುಖಂಡರಾದ ಅಂಜಿನಪ್ಪ ಕಾರಟಗಿ, ಹುಲಿರಾಜ ತೊಂಡಿಹಾಳ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ಆಸ್ತಿ ತೆರಿಗೆ ಪರಿಷ್ಕರಣೆ ಮಸೂದೆ ; ವಿಧಾನ ಪರಿಷತ್ ಒಪ್ಪಿಗೆ

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ತಿದ್ಧುಪಡಿ ಮಸೂದೆಗಳಿಗೆ ವಿಧಾನ ಪರಿಷತ್ ಸೋಮವಾರ ಒಪ್ಪಿಗೆ ನೀಡಿದೆ. ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ಕರ್ನಾಟಕ ನಗರ ಪಾಲಿಕೆಗಳ ತಿದ್ದುಪಡಿ ಮಸೂದೆ 2021 ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಂಡಿಸಿದರು.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…